BCS_India_kn_irv_1pe_book/1pe/2.json

29 lines
9.1 KiB
JSON

{
"1": "ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ ",
"2": "ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ ",
"3": "ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ ",
"4": "ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ ",
"5": "ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ ",
"6": "ಇಗೋ ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ",
"7": "ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು ಆದರೆ ನಂಬದೆಯಿರುವವರಿಗೆ ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ",
"8": "ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ ",
"9": "ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಸ್ವಕೀಯ ಜನರೂ ಆಗಿದ್ದೀರಿ ",
"10": "ಮೊದಲು ನೀವು ಪ್ರಜೆಯಾಗಿರಲಿಲ್ಲ ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ ",
"11": "ಪ್ರಿಯರೇ ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ",
"12": "ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು ",
"13": "ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ ",
"14": "ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ ",
"15": "ತಿಳುವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ ",
"16": "ಸ್ವತಂತ್ರರಂತೆ ನಡೆದುಕೊಳ್ಳಿರಿ ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ ",
"17": "ಎಲ್ಲರನ್ನೂ ಸನ್ಮಾನಿಸಿರಿ ಸಹೋದರರನ್ನು ಪ್ರೀತಿಸಿರಿ ದೇವರಿಗೆ ಭಯಪಡಿರಿ ಅರಸನನ್ನು ಗೌರವಿಸಿರಿ ",
"18": "ಸೇವಕರೇ ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ ",
"19": "ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ ",
"20": "ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ ",
"21": "ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು ",
"22": "ಆತನು ಯಾವ ಪಾಪವನ್ನೂ ಮಾಡಲಿಲ್ಲ ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ ",
"23": "ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು ",
"24": "ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು ",
"25": "ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ",
"front": "\\s ಪವಿತ್ರ ಜನಾಂಗ ಮತ್ತು ಸಜೀವ ಕಲ್ಲು\n\\p"
}