bavari_kan-x-bavari_luk_tex.../07/21.txt

1 line
1.2 KiB
Plaintext

\v 21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಉಪದ್ರವ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು; ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. \v 22 ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - <<ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. \v 23 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು>> ಎಂದು ಹೇಳಿದನು.