bavari_kan-x-bavari_luk_tex.../13/01.txt

1 line
1.3 KiB
Plaintext

\c 13 ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಬೋಧಿಸುವುದಕ್ಕಾಗಿ ಯೇಸು ಫಲಕೊಡದ ಅಂಜೂರ ಮರದ ಸಾಮ್ಯವನ್ನು ಹೇಳಿದ್ದು \v 1 ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. \v 2 ಅದಕ್ಕೆ ಆತನು ಅವರಿಗೆ, <<ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? \v 3 ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.