1830 lines
233 KiB
Plaintext
1830 lines
233 KiB
Plaintext
\id MRK
|
|
\ide UTF-8
|
|
\sts MRK, Free Bible Kannada
|
|
\h ಮಾರ್ಕನು ಬರೆದ ಸುವಾರ್ತೆ
|
|
\toc1 ಮಾರ್ಕನು ಬರೆದ ಸುವಾರ್ತೆ
|
|
\toc2 ಮಾರ್ಕನು ಬರೆದ ಸುವಾರ್ತೆ
|
|
\toc3 mrk
|
|
\mt1 ಮಾರ್ಕನು ಬರೆದ ಸುವಾರ್ತೆ
|
|
|
|
|
|
\s5
|
|
\c 1
|
|
\s1 ಸ್ನಾನಿಕನಾದ ಯೋಹಾನನು
|
|
\r (ಮತ್ತಾ. 3:1-12; ಲೂಕ 3:1-18; ಯೋಹಾ. 1:19-28)
|
|
\p
|
|
\v 1
|
|
\f +
|
|
\fr 1:1
|
|
\ft ಕೆಲವು ಪ್ರತಿಗಳಲ್ಲಿ ದೇವಕುಮಾರನಾದ ಎಂಬ ಪದವು ಇಲ್ಲ.
|
|
\f* ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತಾದ ಸುವಾರ್ತೆಯ ಪ್ರಾರಂಭವು.
|
|
\p
|
|
\v 2
|
|
\f +
|
|
\fr 1:2
|
|
\ft ಮಲಾ. 3:1.
|
|
\f* ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ,
|
|
\q1 <<ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ;
|
|
\q2 ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.>>
|
|
\q1
|
|
\v 3
|
|
\f +
|
|
\fr 1:3
|
|
\ft ಯೆಶಾ. 40. 3:
|
|
\f* << <ಕರ್ತನ ದಾರಿಯನ್ನು ಸಿದ್ಧಮಾಡಿರಿ;
|
|
\q2 ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ>
|
|
\q1 ಎಂದು
|
|
\f +
|
|
\fr 1:3
|
|
\ft ಮೂಲಭಾಷೆಯಲ್ಲಿ ಮರುಭೂಮಿಯೆಂದು ಉಪಯೋಗಿಸಲಾಗಿದೆ.
|
|
\f* ಅಡವಿಯಲ್ಲಿ ಕೂಗುವವನ ಶಬ್ದವದೆ>> ಎಂಬುದೇ.
|
|
\m
|
|
\s5
|
|
\v 4
|
|
\f +
|
|
\fr 1:4
|
|
\ft ಕೆಲವು ಪ್ರತಿಗಳಲ್ಲಿ, ಪ್ರವಾದಿಗಳ ಎಂದು ಬರೆದಿದೆ.
|
|
\f* ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
|
|
\v 5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
|
|
\v 6 ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
|
|
\s5
|
|
\v 7 ಅವನು <<ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
|
|
\v 8 ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ>> ಎಂದು ಸಾರಿ ಹೇಳಿದನು.
|
|
\s1 ಯೇಸುವಿನ ದೀಕ್ಷಾಸ್ನಾನ
|
|
\r (ಮತ್ತಾ. 3:13-4:17; ಲೂಕ 3:21, 22; 4:1-15; ಯೋಹಾ. 1:31-33)
|
|
\s5
|
|
\p
|
|
\v 9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
|
|
\v 10 ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
|
|
\v 11 ಆಗ <<ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ>> ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
|
|
\s5
|
|
\p
|
|
\v 12 ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
|
|
\f +
|
|
\fr 1:12
|
|
\ft ಮತ್ತಾ. 4:1-11; ಲೂಕ. 4:1-13:
|
|
\f*
|
|
\v 13 ಆತನು ನಲವತ್ತು ದಿವಸ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
|
|
\s5
|
|
\v 14
|
|
\f +
|
|
\fr 1:14
|
|
\ft ಯೋಹಾ. 3:24:
|
|
\f* ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
|
|
\v 15
|
|
\f +
|
|
\fr 1:15
|
|
\ft ಮತ್ತಾ. 4:17:
|
|
\f* <<ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.>>
|
|
\s1 ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು
|
|
\r (ಮತ್ತಾ. 4:18-22; ಲೂಕ 5:1-11)
|
|
\s5
|
|
\p
|
|
\v 16 ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
|
|
\v 17 ಯೇಸು ಅವರಿಗೆ, <<ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು>> ಎಂದು ಹೇಳಿದನು.
|
|
\v 18 ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
|
|
\s5
|
|
\p
|
|
\v 19 ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
|
|
\v 20 ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
|
|
\s1 ಯೇಸು ದೆವ್ವವನ್ನು ಬಿಡಿಸಿದ್ದು
|
|
\r (ಮತ್ತಾ. 8:14-16; ಲೂಕ 4:31-41)
|
|
\s5
|
|
\p
|
|
\v 21 ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
|
|
\v 22 ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
|
|
\s5
|
|
\v 23 ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
|
|
\v 24 ಆ ದೆವ್ವವು, <<ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು>> ಎಂದು ಕೂಗಿ ಹೇಳಿತು.
|
|
\v 25 ಯೇಸು ಅದನ್ನು ಗದರಿಸಿ, <<ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ>> ಎಂದನು.
|
|
\v 26 ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
|
|
\s5
|
|
\v 27 ಜನರೆಲ್ಲರೂ ಬೆರಗಾಗಿ, <<ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!>> ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
|
|
\v 28 ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
|
|
\s ರೋಗಿಗಳನ್ನು ಸ್ವಸ್ಥಮಾಡಿದ್ದು
|
|
\s5
|
|
\p
|
|
\v 29
|
|
\f +
|
|
\fr 1:29
|
|
\ft ಪಾಠಾಂತರ ಆ ಮೇಲೆ ಆತನು ಬಂದನು.
|
|
\f* ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
|
|
\v 30 ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
|
|
\v 31 ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
|
|
\s5
|
|
\p
|
|
\v 32 ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
|
|
\v 33 ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
|
|
\v 34 ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
|
|
\s1 ಯೇಸುವಿನ ಏಕಾಂತ ಪ್ರಾರ್ಥನೆ
|
|
\r (ಲೂಕ 4:42-44)
|
|
\s5
|
|
\p
|
|
\v 35 ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
|
|
\v 36 ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
|
|
\v 37 ಆತನನ್ನು ಕಂಡಾಗ <<ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ>> ಎಂದರು.
|
|
\s5
|
|
\p
|
|
\v 38 ಆತನು ಅವರಿಗೆ, <<ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ>> ಎಂದು ಹೇಳಿದನು.
|
|
\v 39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
|
|
\s1 ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು
|
|
\r (ಮತ್ತಾ. 8:2-4; ಲೂಕ 5:12-16)
|
|
\s5
|
|
\p
|
|
\v 40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, <<ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ>> ಎಂದು ಬೇಡಿಕೊಂಡನು.
|
|
\p
|
|
\v 41 ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, <<ನನಗೆ ಮನಸ್ಸುಂಟು; ಶುದ್ಧನಾಗು>> ಅಂದನು.
|
|
\v 42 ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
|
|
\s5
|
|
\v 43 ಆಗ ಯೇಸು ಅವನಿಗೆ, <<ಯಾರಿಗೂ ಏನೂ ಹೇಳಬೇಡ ನೋಡು;
|
|
\v 44 ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ
|
|
\f +
|
|
\fr 1:44
|
|
\ft ಯಾಜ. 14:1-32:
|
|
\f* ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ>> ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
|
|
\s5
|
|
\v 45 ಆದರೆ ಅವನು ಹೊರಟುಹೋಗಿ ಎಲ್ಲಾಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
|
|
|
|
\s5
|
|
\c 2
|
|
\s1 ಯೇಸು ಒಬ್ಬ ಪಾರ್ಶ್ವವಾಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪ
|
|
\r (ಮತ್ತಾ. 9:1-8; ಲೂಕ 5:17-26)
|
|
\p
|
|
\v 1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
|
|
\v 2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
|
|
\s5
|
|
\v 3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
|
|
\v 4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
|
|
\s5
|
|
\v 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, <<ಮಗನೇ, ನಿನ್ನ
|
|
\f +
|
|
\fr 2:5
|
|
\ft ಕೀರ್ತ. 103:3; ಲೂಕ. 7:48:
|
|
\f* ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು.
|
|
\v 6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
|
|
\v 7 <<ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?>> ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
|
|
\s5
|
|
\v 8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, <<ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
|
|
\v 9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ <ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ> ಅಥವಾ <ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ> ಅನ್ನುವುದೋ?
|
|
\s5
|
|
\v 10 ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
|
|
\v 11
|
|
\f +
|
|
\fr 2:11
|
|
\ft ಯೋಹಾ. 5:8; ಅ. ಕೃ. 3:6:
|
|
\f* <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ>> ಅಂದನು.
|
|
\v 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, <<ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ>> ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
|
|
\s1 ಯೇಸು ಲೇವಿಯನ್ನು ಕರೆದದ್ದು
|
|
\r (ಮತ್ತಾ. 9:9-13; ಲೂಕ 5:27-32)
|
|
\s5
|
|
\p
|
|
\v 13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
|
|
\v 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
|
|
\s5
|
|
\p
|
|
\v 15 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ
|
|
\f +
|
|
\fr 2:15
|
|
\ft ತೆರಿಗೆಯವರೂ
|
|
\f* ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು.
|
|
\f +
|
|
\fr 2:15
|
|
\ft ಪಾಠಾಂತರ:ಅಂಥವರು ಬಹುಮಂದಿ ಇದ್ದರು; ಯೇಸುವನ್ನು ಹಿಂಬಾಲಿಸಿದರು. ಯೇಸುವು ಪಾಪಿಗಳ ಸಂಗಡ ಊಟಮಾಡುವುದನ್ನು ಫರಿಸಾಯರಾದ ಶಾಸ್ತ್ರಿಗಳು ಕಂಡು
|
|
\f* ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
|
|
\v 16 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಕೇಳಿದರು.
|
|
\s5
|
|
\v 17 ಯೇಸು ಅದನ್ನು ಕೇಳಿ ಅವರಿಗೆ, <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು.
|
|
\s1 ಉಪವಾಸದ ಕುರಿತಾದ ಪ್ರಶ್ನೆ
|
|
\r (ಮತ್ತಾ. 9:14-17; ಲೂಕ 5:33-38)
|
|
\s5
|
|
\p
|
|
\v 18 ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? <<ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?>> ಎಂದು ಕೇಳಿದರು.
|
|
\v 19 ಅದಕ್ಕೆ ಯೇಸು ಅವರಿಗೆ,
|
|
\f +
|
|
\fr 2:19
|
|
\ft ಯೋಹಾ 3:29.
|
|
\f* <<ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
|
|
\s5
|
|
\v 20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
|
|
\p
|
|
\v 21 <<ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
|
|
\s5
|
|
\v 22 ಮತ್ತು ಹಳೆಯ
|
|
\f +
|
|
\fr 2:22
|
|
\ft ಮೇಕೆ ಅಥವಾ ಯಾವುದೆ ಪ್ರಾಣಿಗಳ ಚರ್ಮದಿಂದ ಮಾಡಿದ ಚೀಲ.
|
|
\f* ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು>> ಎಂದು ಹೇಳಿದನು.
|
|
\s1 ಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನು
|
|
\r (ಮತ್ತಾ. 12:1-14; ಲೂಕ 6:1-11)
|
|
\s5
|
|
\p
|
|
\v 23 ಯೇಸು ಸಬ್ಬತ್ ದಿನದಲ್ಲಿ
|
|
\f +
|
|
\fr 2:23
|
|
\ft ಧಾನ್ಯ ಅಥವಾ ಕಾಳು ಪೂರ್ಣವಾಗಿ ಬೆಳೆದ, ಫಸಲು ಕೊಡುವ.
|
|
\f* ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
|
|
\v 24 ಫರಿಸಾಯರು ಆತನನ್ನು, <<ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?>> ಎಂದು ಕೇಳಿದರು.
|
|
\s5
|
|
\v 25 ಆಗ ಯೇಸು ಅವರಿಗೆ, <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
|
|
\v 26
|
|
\f +
|
|
\fr 2:26
|
|
\ft 1. ಸಮು. 21:6:
|
|
\f* ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ನುಡಿಯುತ್ತಾ,
|
|
\s5
|
|
\p
|
|
\v 27
|
|
\f +
|
|
\fr 2:27
|
|
\ft ವಿಮೋ. 23:12; ಧರ್ಮೋ. 5:14:
|
|
\f* <<ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
|
|
\v 28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ>> ಎಂದು ಯೇಸು ಹೇಳಿದನು.
|
|
|
|
\s5
|
|
\c 3
|
|
\s ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು
|
|
\p
|
|
\v 1 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ
|
|
\f +
|
|
\fr 3:1
|
|
\ft ಸೊರಗಿಹೋದ ಕೈ, ದುರ್ಬಲವಾದ, ಬಲಹೀನವಾದದ್ದು, ಕಳೆಗುಂದು.
|
|
\f* ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
|
|
\v 2 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
|
|
\s5
|
|
\v 3 ಆತನು ಕೈಬತ್ತಿದ್ದವನಿಗೆ, <<ಎದ್ದು ನಡುವೆ ನಿಂತುಕೋ>> ಎಂದು ಹೇಳಿದನು.
|
|
\v 4 ಆಗ ಅವರಿಗೆ, <<ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?>> ಎಂದು ಹೇಳಲು ಅವರು ಸುಮ್ಮನಿದ್ದರು.
|
|
\s5
|
|
\v 5 ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, <<ನಿನ್ನ ಕೈ ಚಾಚು>> ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
|
|
\v 6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
|
|
\s1 ಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದು
|
|
\r (ಮತ್ತಾ. 10:1-4; ಲೂಕ 6:12-19)
|
|
\s5
|
|
\p
|
|
\v 7 ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
|
|
\v 8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
|
|
\s5
|
|
\v 9 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
|
|
\v 10 ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
|
|
\s5
|
|
\v 11
|
|
\f +
|
|
\fr 3:11
|
|
\ft ಮಾರ್ಕ. 1:26-34; ಲೂಕ. 4:41.
|
|
\f* ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು
|
|
\f +
|
|
\fr 3:11
|
|
\ft ಮತ್ತಾ. 14:33:
|
|
\f* <<ನೀನು ದೇವಕುಮಾರನು>> ಎಂದು ಕೂಗುತ್ತಿದ್ದವು.
|
|
\v 12 ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
|
|
\s ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು
|
|
\s5
|
|
\p
|
|
\v 13 ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
|
|
\v 14 ಆತನು ಹನ್ನೆರಡು ಮಂದಿಯನ್ನು [ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು] ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
|
|
\v 15 ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
|
|
\v 16 ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ:
|
|
\f +
|
|
\fr 3:16
|
|
\ft ಅ. ಕೃ. 1:13:
|
|
\f* ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
|
|
\s5
|
|
\v 17 ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
|
|
\v 18 ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
|
|
\v 19 ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
|
|
\s1 ಯೇಸುವು ಮತ್ತು ಬೆಲ್ಜೆಬೂಲನು
|
|
\r (ಮತ್ತಾ. 12:22-32,46-50; ಲೂಕ 11:14-22; 8:19-21)
|
|
\s5
|
|
\p
|
|
\v 20 ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
|
|
\v 21 ಇದನ್ನು ಕೇಳಿ ಆತನ ಬಂಧುಗಳು <<ಅವನಿಗೆ ಹುಚ್ಚುಹಿಡಿದಿದೆ>> ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
|
|
\p
|
|
\v 22 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, <<ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ>> ಹೇಳುತ್ತಿದ್ದರು.
|
|
\s5
|
|
\v 23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, <<ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
|
|
\v 24 ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;
|
|
\v 25 ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.
|
|
\s5
|
|
\v 26 ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
|
|
\v 27 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
|
|
\s5
|
|
\v 28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
|
|
\v 29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು>> ಎಂದು ಹೇಳಿದನು.
|
|
\v 30 ಅವರು <<ಈತನಲ್ಲಿ ಅಶುದ್ಧಾತ್ಮವಿದೆ>> ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
|
|
\s ಯೇಸುವಿನ ತಾಯಿ ಹಾಗೂ ಸಹೋದರರು
|
|
\s5
|
|
\p
|
|
\v 31 ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
|
|
\v 32 ಆ ಜನರು ಆತನಿಗೆ, <<ನಿನ್ನ ತಾಯಿಯೂ, ನಿನ್ನ
|
|
\f +
|
|
\fr 3:32
|
|
\ft ಮೂಲ ಭಾಷೆಯ ಕೆಲವು ಹಸ್ತಪ್ರತಿಗಳಲ್ಲಿ ಸಹೋದರರು ಮತ್ತು ಸಹೋದರಿಯರು ಎಂದು ಬರೆಯಲಾಗಿದೆ
|
|
\f* ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು>> ಎಂದು ಹೇಳಿದರು.
|
|
\s5
|
|
\v 33 ಅದಕ್ಕೆ ಆತನು ಅವರಿಗೆ, <<ನನಗೆ ತಾಯಿಯೂ, ತಮ್ಮಂದಿರೂ ಯಾರು?>> ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
|
|
\v 34 <<ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
|
|
\v 35 ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ>> ಅಂದನು.
|
|
|
|
\s5
|
|
\c 4
|
|
\s1 ದೇವರ ರಾಜ್ಯಹೊಂದುವ ಬಗೆಗಿನ ಸಾಮ್ಯಗಳು
|
|
\s ಬಿತ್ತುವವನ ಸಾಮ್ಯ
|
|
\f +
|
|
\fr 4:0
|
|
\ft ಸಾಮ್ಯ- ದೇವರ ರಾಜ್ಯದ ಅಥವಾ ಆತ್ಮಿಕ ವಿಷಯಗಳ ಅರ್ಥವನ್ನು ಪ್ರತಿದಿನ ಬಳಸುವ ವಸ್ತುಗಳ ಮೂಲಕ ನೀತಿಯನ್ನು ವಿವರಿಸುವುದು.
|
|
\f*
|
|
\r (ಮತ್ತಾ. 13:1-34; ಲೂಕ 8:4-18; 13:18,19)
|
|
\p
|
|
\v 1 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
|
|
\v 2 ಆಗ ಆತನು ಅವರಿಗೆ
|
|
\f +
|
|
\fr 4:2
|
|
\f* ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:
|
|
\s5
|
|
\v 3 <<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.
|
|
\v 4 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
|
|
\v 5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;
|
|
\s5
|
|
\v 6 ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.
|
|
\v 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
|
|
\s5
|
|
\v 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.>>
|
|
\v 9 ಮತ್ತು ಆತನು <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.
|
|
\s5
|
|
\p
|
|
\v 10 ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
|
|
\v 11 ಆತನು ಅವರಿಗೆ, <<ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.
|
|
\q
|
|
\v 12 ಅದ್ದರಿಂದ,
|
|
\q1
|
|
\f +
|
|
\fr 4:12
|
|
\ft ಯೆಶಾ. 6:9, 10:
|
|
\f* <<ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ,
|
|
\q2 ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ,
|
|
\q1 ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.>>
|
|
\s5
|
|
\p
|
|
\v 13 ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, <<ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?
|
|
\v 14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.
|
|
\v 15 ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
|
|
\s5
|
|
\p
|
|
\v 16 ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;
|
|
\v 17 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
|
|
\s5
|
|
\p
|
|
\v 18 ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;
|
|
\v 19 ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.
|
|
\v 20 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು>> ಅಂದನು.
|
|
\s ದೀಪಸ್ತಂಭದ ಸಾಮ್ಯ
|
|
\s5
|
|
\p
|
|
\v 21 ಇದಲ್ಲದೆ ಯೇಸು ಅವರಿಗೆ,
|
|
\f +
|
|
\fr 4:21
|
|
\ft ಮತ್ತಾ. 5:15; ಲೂಕ. 8:16; 11:33:
|
|
\f* <<ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
|
|
\v 22 ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ;
|
|
\f +
|
|
\fr 4:22
|
|
\ft ಮತ್ತಾ. 10:26; ಲೂಕ. 8:17; 12:2:
|
|
\f* ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.
|
|
\v 23
|
|
\f +
|
|
\fr 4:23
|
|
\ft ಮಾರ್ಕ 4:9; ಮತ್ತಾ. 11:15; ಪ್ರಕ. 2:7,11,17,29; 3:6,13,22.
|
|
\f* ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು.
|
|
\s5
|
|
\p
|
|
\v 24 ಮತ್ತು ಆತನು ಅವರಿಗೆ; <<ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ.
|
|
\f +
|
|
\fr 4:24
|
|
\ft ಮತ್ತಾ. 7:2; ಲೂಕ. 6:38:
|
|
\f* ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.
|
|
\v 25
|
|
\f +
|
|
\fr 4:25
|
|
\ft ಮತ್ತಾ. 25:29; ಲೂಕ. 8:18; 19:26:
|
|
\f* ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು>> ಎಂದು ಹೇಳಿದನು.
|
|
\s ಬೆಳೆಯುವ ಬೀಜದ ಸಾಮ್ಯ
|
|
\s5
|
|
\p
|
|
\v 26 ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; <<ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
|
|
\v 27 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದಿಂದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
|
|
\v 28 ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.
|
|
\v 29 ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ>> ಅಂದನು.
|
|
\s ಸಾಸಿವೆಕಾಳಿನ ಸಾಮ್ಯ
|
|
\s5
|
|
\p
|
|
\v 30 ಇನ್ನೂ ಆತನು ಹೇಳಿದ್ದು; <<ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
|
|
\v 31 ಅದು ಸಾಸಿವೆಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
|
|
\v 32 ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ>> ಅಂದನು.
|
|
\s5
|
|
\p
|
|
\v 33 ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
|
|
\v 34 ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.
|
|
\s1 ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು
|
|
\r (ಮತ್ತಾ. 8:23-27; ಲೂಕ 8:22-25)
|
|
\s5
|
|
\p
|
|
\v 35 ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, <<ಆಚೇದಡಕ್ಕೆ ಹೋಗೋಣ>> ಎಂದು ಹೇಳಿದನು.
|
|
\v 36 ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
|
|
\v 37 ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
|
|
\s5
|
|
\v 38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, <<ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ>> ಎಂದು ಕೇಳಿದರು.
|
|
\v 39 ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ <<ಶಾಂತವಾಗಿರು, ಮೊರೆಯಬೇಡ>> ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
|
|
\s5
|
|
\v 40 ತರುವಾಯ ಆತನು ಅವರನ್ನು, <<ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?>> ಎಂದು ಕೇಳಲು
|
|
\v 41 ಅವರು ಬಹು ಭಯಪಟ್ಟು, <<ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
|
|
|
|
\s5
|
|
\c 5
|
|
\s1 ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
|
|
\r (ಮತ್ತಾ. 8:28-34; ಲೂಕ 8:26-39)
|
|
\p
|
|
\v 1 ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
|
|
\v 2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
|
|
\s5
|
|
\v 3-4 ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
|
|
\s5
|
|
\p
|
|
\v 5 ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
|
|
\v 6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,
|
|
\s5
|
|
\v 7 ಮಹಾಶಬ್ದದಿಂದ ಆರ್ಭಟಿಸಿ, <<ಯೇಸುವೇ,
|
|
\f +
|
|
\fr 5:7
|
|
\ft ಲೂಕ 1:32; 6:35; ಅ. ಕೃ. 16:17. ಪರಾತ್ಪರನಾದ
|
|
\f* ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ
|
|
\f +
|
|
\fr 5:7
|
|
\ft ನನ್ನ ವಿಷಯಗಳು ನಿನಗೆ ಯಾಕೆ ಬೇಕು.
|
|
\f* ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ>> ಎಂದು ಹೇಳಿದನು.
|
|
\v 8 ಏಕೆಂದರೆ ಯೇಸು, <<ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು>> ಎಂದು ಆಜ್ಞಾಪಿಸಿದ್ದನು.
|
|
\s5
|
|
\p
|
|
\v 9 ಯೇಸು, <<ನಿನ್ನ ಹೆಸರು ಏನೆಂದು>> ಅವನನ್ನು ಕೇಳಿದ್ದಕ್ಕೆ ಅವನು, <<ನನ್ನ ಹೆಸರು
|
|
\f +
|
|
\fr 5:9
|
|
\ft ಅಂದರೆ 6,000 ಸೈನಿಕರುಳ್ಳ ಸೈನ್ಯದಳ.
|
|
\f* ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ>> ಎಂದು ಹೇಳಿ,
|
|
\v 10 ನಮ್ಮನ್ನು ಈ ಪ್ರಾಂತದಿಂದ
|
|
\f +
|
|
\fr 5:10
|
|
\ft ಸೀಮೆಯಿಂದ
|
|
\f* ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
|
|
\s5
|
|
\p
|
|
\v 11 ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು
|
|
\f +
|
|
\fr 5:11
|
|
\ft ಅಂದರೆ ಪ್ರಾಣಿಗಳ ಗುಂಪು.
|
|
\f* ಮೇಯುತ್ತಿತ್ತು.
|
|
\v 12 ಆ ಅಶುದ್ಧಾತ್ಮಗಳು, <<ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು>> ಎಂದು ಆತನನ್ನು ಬೇಡಿಕೊಂಡವು.
|
|
\v 13 ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
|
|
\s5
|
|
\p
|
|
\v 14 ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
|
|
\v 15 ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
|
|
\s5
|
|
\p
|
|
\v 16 ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
|
|
\v 17 ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
|
|
\s5
|
|
\p
|
|
\v 18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
|
|
\v 19 ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, <<ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು>> ಅಂದನು.
|
|
\v 20
|
|
\f +
|
|
\fr 5:20
|
|
\ft ಮಾರ್ಕ. 1:45
|
|
\f* ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
|
|
\s1 ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ
|
|
\r (ಮತ್ತಾ. 9:18-26; ಲೂಕ 8:40-56)
|
|
\s5
|
|
\p
|
|
\v 21 ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
|
|
\v 22 ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯಿರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,
|
|
\v 23 <<ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು>> ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
|
|
\v 24 ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
|
|
\s5
|
|
\p
|
|
\v 25 ಆಗ ಅಲ್ಲಿ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.
|
|
\v 26 ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
|
|
\p
|
|
\v 27-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, <<ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು>> ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
|
|
\v 29 ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
|
|
\p
|
|
\v 30 ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು
|
|
\v 31 ಆತನ ಶಿಷ್ಯರು ಆತನಿಗೆ, <<ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ <ನನ್ನನ್ನು ಮುಟ್ಟಿದವರು ಯಾರು> ಎಂದು ಕೇಳುತ್ತೀಯಲ್ಲಾ?>> ಎಂದರು.
|
|
\v 32 ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
|
|
\p
|
|
\v 33 ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
|
|
\v 34 ಆತನು ಆಕೆಗೆ, <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ>> ಎಂದು ಹೇಳಿದನು.
|
|
\p
|
|
\v 35 ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಅಂದರು.
|
|
\p
|
|
\v 36 ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು.
|
|
\v 37 ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
|
|
\v 38 ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
|
|
\p
|
|
\v 39 ಆತನು ಒಳಕ್ಕೆ ಹೋಗಿ, <<ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ>> ಅನ್ನಲು,
|
|
\v 40 ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
|
|
\p
|
|
\v 41 ಅವಳ ಕೈಹಿಡಿದು, <<ತಲಿಥಾಕೂಮ್>> ಅಂದನು. ಈ ಮಾತಿಗೆ <<
|
|
\f +
|
|
\fr 5:41
|
|
\ft ಚಿಕ್ಕ ಹುಡುಗಿ ಎಂದು ಅರ್ಥ.
|
|
\f* ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ>> ಎಂದರ್ಥ.
|
|
\v 42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು.
|
|
\v 43
|
|
\f +
|
|
\fr 5:43
|
|
\ft ಮಾರ್ಕ. 2:12; ಲೂಕ. 2:47:
|
|
\f* ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
|
|
|
|
\s5
|
|
\c 6
|
|
\s1 ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು
|
|
\r (ಮತ್ತಾ. 13:54-58; ಲೂಕ 4:15-30)
|
|
\p
|
|
\v 1 ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
|
|
\v 2 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. <<ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
|
|
\v 3 ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?>> ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
|
|
\s5
|
|
\v 4 ಯೇಸು ಅವರಿಗೆ, <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು.
|
|
\v 5 ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
|
|
\v 6 ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
|
|
\s1 ಯೇಸು ಸುವಾರ್ತೆ ಸಾರುವುದಕ್ಕೆ ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು
|
|
\r (ಮತ್ತಾ. 9:35 -10:14; ಲೂಕ 9:1-6)
|
|
\s5
|
|
\p
|
|
\v 7 ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
|
|
\v 8 ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.
|
|
\v 9 ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆಕೊಟ್ಟನು.
|
|
\s5
|
|
\v 10 ಇದಲ್ಲದೆ ಆತನು ಅವರಿಗೆ, <<ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.
|
|
\v 11 ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ>> ಎಂದು ಹೇಳಿದನು.
|
|
\s5
|
|
\v 12 ಅವರು ಹೊರಟು ಹೋಗಿ ಜನರಿಗೆ, <<ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು>> ಎಂದು ಸಾರಿ ಹೇಳಿದರು.
|
|
\v 13 ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
|
|
\s1 ಸ್ನಾನಿಕನಾದ ಯೋಹಾನನ ಶಿರಚ್ಛೇದನ
|
|
\r (ಮತ್ತಾ. 14:1-12; ಲೂಕ 9:7-9; 3:19,20)
|
|
\s5
|
|
\p
|
|
\v 14 ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, <<ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ>> ಎಂದು ಹೇಳುತ್ತಿದ್ದರು.
|
|
\v 15 ಕೆಲವರು, <<ಇವನು ಎಲೀಯನೆಂತಲೂ>> ಮತ್ತೆ ಕೆಲವರು, <<ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ>> ಹೇಳಿದರು.
|
|
\s5
|
|
\v 16 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, <<ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ>> ಎಂದು ಹೇಳಿದನು.
|
|
\p
|
|
\v 17 ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
|
|
\s5
|
|
\v 18 ಇದರ ನಿಮಿತ್ತ ಯೋಹಾನನು ಹೆರೋದನಿಗೆ, <<ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ>> ಎಂದು ಹೇಳುತ್ತಿದ್ದನು.
|
|
\v 19 ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
|
|
\v 20 ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
|
|
\s5
|
|
\p
|
|
\v 21 ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
|
|
\v 22 ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, <<ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
|
|
\s5
|
|
\v 23 ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ>> ಎಂದು ಪ್ರಮಾಣಮಾಡಿದನು.
|
|
\v 24 ಆಗ ಅವಳು ಹೊರಕ್ಕೆ ಹೋಗಿ, <<ನಾನು ಏನು ಕೇಳಿಕೊಳ್ಳಲಿ?>> ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, <<ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ>> ಅಂದಳು.
|
|
\v 25 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, <<ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು
|
|
\f +
|
|
\fr 6:25
|
|
\ft ದೊಡ್ಡ ತಟ್ಟೆ
|
|
\f* ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ>> ಎಂದು ಕೇಳಿಕೊಂಡಳು.
|
|
\s5
|
|
\v 26 ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
|
|
\v 27 ಕೂಡಲೆ ತನ್ನ
|
|
\f +
|
|
\fr 6:27
|
|
\ft ಕಾವಲುಗಾರ
|
|
\f* ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;
|
|
\v 28 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
|
|
\v 29 ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
|
|
\s1 ಯೇಸು ಐದುಸಾವಿರ ಜನರಿಗೆ ಊಟಮಾಡಿಸಿದ್ದು
|
|
\r (ಮತ್ತಾ. 14:13-36; ಲೂಕ 9:10-17; ಯೋಹಾ. 6:1-21)
|
|
\s5
|
|
\p
|
|
\v 30
|
|
\f +
|
|
\fr 6:30
|
|
\ft ಮಾರ್ಕ. 6:7:
|
|
\f* ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
|
|
\v 31 ಆತನು ಅವರಿಗೆ, <<ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ>> ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
|
|
\v 32 ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.
|
|
\s5
|
|
\v 33 ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
|
|
\v 34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
|
|
\s5
|
|
\v 35 ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, <<ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;
|
|
\v 36 ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ>> ಎಂದು ಹೇಳಿದರು.
|
|
\s5
|
|
\v 37 ಅದಕ್ಕೆ ಯೇಸು, <<ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ>> ಎಂದು ಉತ್ತರಕೊಟ್ಟನು. ಅದಕ್ಕವರು, <<ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?>> ಎಂದು ಹೇಳಲು
|
|
\v 38 ಆತನು, <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ>> ಅಂದನು. ಅವರು ವಿಚಾರಿಸಿಕೊಂಡು ಬಂದು, <<ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ>> ಅಂದರು.
|
|
\s5
|
|
\v 39 ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ
|
|
\f +
|
|
\fr 6:39
|
|
\ft ಅರ್ಥ ಸಾಲುಸಾಲಾಗಿ.
|
|
\f* ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
|
|
\v 40 ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
|
|
\v 41 ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
|
|
\s5
|
|
\v 42 ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.
|
|
\v 43 ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
|
|
\v 44 ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
|
|
\s1 ಯೇಸು ನೀರಿನ ಮೇಲೆ ನಡೆದದ್ದು
|
|
\s5
|
|
\p
|
|
\v 45 ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
|
|
\v 46 ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.
|
|
\p
|
|
\v 47 ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
|
|
\s5
|
|
\v 48 ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ
|
|
\f +
|
|
\fr 6:48
|
|
\ft ಸುಮಾರು ಮುಂಜಾನೆ ಮೂರು ಗಂಟೆ.
|
|
\f* ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
|
|
\v 49 ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
|
|
\v 50 ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, <<ಧೈರ್ಯವಾಗಿರಿ, ನಾನೇ, ಹೆದರಬೇಡಿರಿ>> ಎಂದು ಹೇಳಿದನು.
|
|
\s5
|
|
\v 51 ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
|
|
\v 52
|
|
\f +
|
|
\fr 6:52
|
|
\ft ಮಾರ್ಕ. 8:17; ಮತ್ತಾ. 16:8,9:
|
|
\f* ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.
|
|
\s5
|
|
\p
|
|
\v 53 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
|
|
\v 54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,
|
|
\v 55 ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು
|
|
\f +
|
|
\fr 6:55
|
|
\ft ಹಿಡಿಯುಳ್ಳ ಹುಲ್ಲಿನ ಹಾಸಿಗೆ, ಮೆತ್ತಗೆ ಇರುವ ಹಾಸಿಗೆ.
|
|
\f* ಡೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.
|
|
\s5
|
|
\v 56 ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
|
|
|
|
\s5
|
|
\c 7
|
|
\s1 ಶುದ್ಧ ಹಾಗೂ ಅಶುದ್ಧ
|
|
\r (ಮತ್ತಾ. 15:1-20)
|
|
\p
|
|
\v 1 ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
|
|
\s5
|
|
\v 2 ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
|
|
\v 3 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
|
|
\v 4 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು
|
|
\f +
|
|
\fr 7:4
|
|
\ft ಕೆಲವು ಪ್ರತಿಗಳಲ್ಲಿ ಸ್ನಾನಮಾಡು ಎಂದು ಬರೆದಿದೆ.
|
|
\f* ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
|
|
\s5
|
|
\v 5 ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, <<ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?>> ಎಂದು ಕೇಳಿದರು.
|
|
\s5
|
|
\v 6 ಅದಕ್ಕೆ ಆತನು, <<ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ:
|
|
\q1
|
|
\f +
|
|
\fr 7:6
|
|
\ft ಯೆಶಾ. 29:13
|
|
\f* << <ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ,
|
|
\q2 ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
|
|
\q1
|
|
\v 7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ
|
|
\q2 ನನಗೆ ಆರಾಧನೆ ಮಾಡುವುದು ವ್ಯರ್ಥ> ಎಂಬುದೇ.
|
|
\m
|
|
\s5
|
|
\v 8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ>> ಎಂದು ಹೇಳಿದನು.
|
|
\v 9 ಆತನು ಇನ್ನೂ ಅವರಿಗೆ, <<ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ
|
|
\f +
|
|
\fr 7:9
|
|
\ft ಲೂಕ 7:30; ಯೋಹಾ. 12:48:
|
|
\f* ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
|
|
\v 10 <ನಿನ್ನ
|
|
\f +
|
|
\fr 7:10
|
|
\ft ವಿಮೋ. 20:12:
|
|
\f* ತಂದೆತಾಯಿಗಳನ್ನು ಗೌರವಿಸಬೇಕು> ಮತ್ತು
|
|
\f +
|
|
\fr 7:10
|
|
\ft ವಿಮೋ. 21:17:
|
|
\f* <ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ> ಮೋಶೆಯು ಹೇಳಿದ್ದಾನೆ.
|
|
\s5
|
|
\v 11 ನೀವಾದರೋ <ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ> ಎಂದು ಹೇಳುವುದಾದರೆ
|
|
\v 12 ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
|
|
\v 13 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ>> ಎಂದು ಹೇಳಿದನು.
|
|
\s5
|
|
\p
|
|
\v 14 ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, <<ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
|
|
\v 15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ>> ಎಂದು ಹೇಳಿದನು.
|
|
\v 16 <<
|
|
\f +
|
|
\fr 7:16
|
|
\ft 16 ನೆಯ ವಚನವು ಮೂಲಗ್ರಂಥದ ಹೆಚ್ಚು ಪ್ರತಿಗಳಲ್ಲಿ ಇಲ್ಲ.
|
|
\f* ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ>> ಅಂದನು.
|
|
\s5
|
|
\p
|
|
\v 17 ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
|
|
\v 18 ಆತನು ಅವರಿಗೆ, <<ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
|
|
\v 19 ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?>> ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
|
|
\s5
|
|
\v 20 ಆತನು ಮತ್ತೆ ಹೇಳಿದ್ದೇನೆಂದರೆ, <<ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
|
|
\v 21 ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
|
|
\v 22 ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
|
|
\v 23 ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ>> ಎಂದನು.
|
|
\s1 ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು
|
|
\r (ಮತ್ತಾ. 15:21-28)
|
|
\s5
|
|
\p
|
|
\v 24 ಯೇಸು ಅಲ್ಲಿಂದ ಹೊರಟು
|
|
\f +
|
|
\fr 7:24
|
|
\ft ಪಾಠಾಂತರ:ತೂರ್ ಸೀದೋನ್ ಪಟ್ಟಣಗಳ.
|
|
\f* ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
|
|
\v 25 ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
|
|
\v 26 ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
|
|
\s5
|
|
\v 27 ಆತನು ಆಕೆಗೆ, <<ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ>> ಎಂದು ಹೇಳಿದನು.
|
|
\v 28 ಆದರೆ ಅದಕ್ಕೆ ಆಕೆಯು, <<ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ>> ಎಂದು ಉತ್ತರಕೊಡಲು
|
|
\s5
|
|
\v 29 ಆತನು, <<ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು>> ಅಂದನು.
|
|
\v 30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
|
|
\s ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು
|
|
\s5
|
|
\p
|
|
\v 31 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
|
|
\v 32 ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
|
|
\s5
|
|
\v 33 ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
|
|
\v 34 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, <<ಎಪ್ಫಥಾ>> ಎಂದು ಹೇಳಿದನು. ಆ ಶಬ್ದಕ್ಕೆ <<ತೆರೆಯಲಿ>> ಎಂದರ್ಥ.
|
|
\v 35 ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
|
|
\s5
|
|
\v 36 ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
|
|
\v 37
|
|
\f +
|
|
\fr 7:37
|
|
\ft ಮಾರ್ಕ. 6:51; 10:26; ಮತ್ತಾ. 15:30, 31:
|
|
\f* ಅವರು ಅತ್ಯಂತ ಆಶ್ಚರ್ಯಪಟ್ಟು, <<ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ>> ಎಂದು ಅಂದುಕೊಂಡರು.
|
|
|
|
\s5
|
|
\c 8
|
|
\s1 ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು
|
|
\r (ಮತ್ತಾ. 15:32-39)
|
|
\p
|
|
\v 1 ಆ ದಿವಸಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
|
|
\v 2 <<ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
|
|
\v 3 ಇವರನ್ನು ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ>> ಎಂದು ಅವರಿಗೆ ಹೇಳಿದನು.
|
|
\v 4 ಅದಕ್ಕೆ ಶಿಷ್ಯರು, <<ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?>> ಅಂದರು.
|
|
\s5
|
|
\v 5 ಆತನು, <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?>> ಎಂದು ಅವರನ್ನು ಕೇಳಿದ್ದಕ್ಕೆ ಅವರು, <<ಏಳು ರೊಟ್ಟಿಗಳು ಇವೆ>> ಅಂದರು.
|
|
\v 6 ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
|
|
\s5
|
|
\v 7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
|
|
\v 8 ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
|
|
\v 9 ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
|
|
\v 10 ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
|
|
\s1 ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
|
|
\r (ಮತ್ತಾ. 16:1-12; ಲೂಕ 11:16; 12:1; ಯೋಹಾ. 6:30)
|
|
\s5
|
|
\p
|
|
\v 11 ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, <<ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು>> ಎಂದು ಕೇಳಿದರು.
|
|
\v 12 ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, <<ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ>> ಎಂದು ಹೇಳಿದನು.
|
|
\v 13 ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
|
|
\s5
|
|
\p
|
|
\v 14 ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
|
|
\v 15 ಯೇಸು ಅವರಿಗೆ, <<ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ>> ಎಂದು ಎಚ್ಚರಿಸಿದನು.
|
|
\s5
|
|
\v 16 ಅವರು, <<ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು>> ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
|
|
\v 17 ಆತನು ಅದನ್ನು ತಿಳಿದು, <<ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
|
|
\s5
|
|
\v 18 ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
|
|
\v 19 ನಾನು
|
|
\f +
|
|
\fr 8:19
|
|
\ft ಮಾರ್ಕ. 6:41,43,44
|
|
\f* ಆ ಐದು ರೊಟ್ಟಿಗಳನ್ನು ಮುರಿದು ಐದುಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?>> ಎಂದು ಕೇಳಿದನು. ಅವರು, <<ಹನ್ನೆರಡು ಬುಟ್ಟಿಗಳು>> ಅಂದರು.
|
|
\s5
|
|
\v 20 <<ಮತ್ತು
|
|
\f +
|
|
\fr 8:20
|
|
\ft ಮಾರ್ಕ. 8:6, 8, 9:
|
|
\f* ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ>> ಎಂದು ಕೇಳಿದನು. ಅವರು, <<ಏಳು ಪುಟ್ಟಿಗಳು>> ಅಂದರು.
|
|
\v 21 ಆಗ ಆತನು ಅವರಿಗೆ, <<ನೀವು ಇನ್ನೂ ಗ್ರಹಿಸಲಿಲ್ಲವೋ?>> ಎಂದು ಕೇಳಿದನು.
|
|
\s1 ಯೇಸು ಕುರುಡನಿಗೆ ಕಣ್ಣುಕೊಟ್ಟದ್ದು
|
|
\s5
|
|
\p
|
|
\v 22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
|
|
\v 23
|
|
\f +
|
|
\fr 8:23
|
|
\ft ಮಾರ್ಕ. 7:33; ಮತ್ತಾ.. 20:34; ಯೋಹಾ 9:6:
|
|
\f* ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, <<ನಿನಗೆ ಏನಾದರೂ ಕಾಣುತ್ತದೆಯೋ?>> ಎಂದು ಅವನನ್ನು ಕೇಳಿದನು.
|
|
\s5
|
|
\v 24 ಅವನು ತಲೆಯೆತ್ತಿ ನೋಡಿ, <<ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ>> ಎಂದನು.
|
|
\v 25 ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
|
|
\v 26 ತರುವಾಯ ಆತನು, <<ನೀನು ಊರೊಳಗೆ ಹೋಗಬೇಡ>> ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
|
|
\s1 ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡದ್ದು
|
|
\r (ಮತ್ತಾ. 16:13-28; ಲೂಕ 9:18-27)
|
|
\s5
|
|
\p
|
|
\v 27 ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, <<ಜನರು ನನ್ನನ್ನು ಯಾರೆಂದು ಹೇಳುತ್ತಾರೆ?>> ಎಂದು ತನ್ನ ಶಿಷ್ಯರನ್ನು ಕೇಳಿದನು.
|
|
\v 28 ಅದಕ್ಕೆ ಅವರು, <<ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ>> ಎಂದು ಹೇಳಿದರು.
|
|
\s5
|
|
\v 29 ಆತನು ಅವರನ್ನು, ಕುರಿತು <<ನೀವು ನನ್ನನ್ನು ಯಾರನ್ನುತ್ತೀರಿ?>> ಎಂದು ಕೇಳಲಾಗಿ ಪೇತ್ರನು, <<ನೀನು ಕ್ರಿಸ್ತನು>> ಎಂದು ಉತ್ತರಕೊಟ್ಟನು.
|
|
\v 30 ಅದಕ್ಕೆ ಆತನು, ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.
|
|
\s ಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದು
|
|
\s5
|
|
\p
|
|
\v 31 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು
|
|
\f +
|
|
\fr 8:31
|
|
\ft ಹೋಶೇ. 6:2:
|
|
\f* ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
|
|
\v 32 ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ <<ನೀನು ಹೀಗೆ ಹೇಳುವುದು ಸರಿಯಲ್ಲ>> ಎಂದು ಪ್ರತಿಭಟಿಸಿದನು.
|
|
\s5
|
|
\v 33 ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ,
|
|
\f +
|
|
\fr 8:33
|
|
\ft ಮತ್ತಾ. 4:10:
|
|
\f* <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ>> ಎಂದು ಹೇಳಿದನು.
|
|
\p
|
|
\v 34 ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, <<ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
|
|
\s5
|
|
\v 35 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
|
|
\v 36 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
|
|
\v 37 ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
|
|
\s5
|
|
\v 38 ವ್ಯಭಿಚಾರಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆ ಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆ ಪಡುವನು>> ಎಂದನು.
|
|
|
|
\s5
|
|
\c 9
|
|
\p
|
|
\v 1 ಯೇಸು ಅವರಿಗೆ, <<ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ>> ಎಂದು ಹೇಳಿದನು.
|
|
\s1 ಯೇಸುವಿನ ರೂಪಾಂತರ
|
|
\r (ಮತ್ತಾ. 17:1-13; ಲೂಕ 9:28-36)
|
|
\p
|
|
\v 2 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
|
|
\v 3 ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
|
|
\s5
|
|
\v 4 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
|
|
\v 5 ಆಗ ಪೇತ್ರನು ಯೇಸುವಿಗೆ, <<ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು
|
|
\f +
|
|
\fr 9:5
|
|
\ft ಪರ್ಣಶಾಲೆ, ಮನೆಯನ್ನು.
|
|
\f* ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು>> ಎಂದು ಹೇಳಿದನು.
|
|
\v 6 ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
|
|
\s5
|
|
\v 7
|
|
\f +
|
|
\fr 9:7
|
|
\ft ಮಾರ್ಕ 1:11; ಮತ್ತಾ. 3:17:
|
|
\f* ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, <<ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ>> ಎಂದು ಧ್ವನಿ ಉಂಟಾಯಿತು.
|
|
\v 8 ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
|
|
\s5
|
|
\p
|
|
\v 9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, <<ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ>> ಎಂದು ಆಜ್ಞಾಪಿಸಿದನು.
|
|
\v 10 ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು <<ಸತ್ತು ಜೀವಿತನಾಗಿ ಏಳುವುದೆಂದರೇನು>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
|
|
\s5
|
|
\v 11 ಇದಲ್ಲದೆ ಅವರು, <<ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?>> ಎಂದು ಆತನನ್ನು ಕೇಳಿದರು.
|
|
\v 12 ಅದಕ್ಕೆ
|
|
\f +
|
|
\fr 9:12
|
|
\ft ಮಲಾ. 4:5, 6; ಕೀರ್ತ. 22:6; ಯೆಶಾ. 53:2, 3; ದಾನಿ. 9:26; ಜೆಕ. 13:7:
|
|
\f* ಯೇಸು ಅವರಿಗೆ, <<ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
|
|
\v 13 ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು>> ಅಂದನು.
|
|
\s1 ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು
|
|
\r (ಮತ್ತಾ. 17:14-21; ಲೂಕ 9:3-42)
|
|
\s5
|
|
\p
|
|
\v 14 ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
|
|
\v 15 ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
|
|
\v 16 ಆತನು ಅವರಿಗೆ, <<ಇವರ ಸಂಗಡ ಏನು ವಾದಮಾಡುತ್ತೀರಿ?>> ಎಂದು ಕೇಳಿದನು.
|
|
\s5
|
|
\v 17 ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, <<ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
|
|
\v 18 ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು>> ಎಂದು ಉತ್ತರ ಕೊಟ್ಟನು.
|
|
\v 19 ಅದಕ್ಕಾತನು, <<ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ>> ಅಂದನು.
|
|
\s5
|
|
\v 20 ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
|
|
\v 21 ಯೇಸು ಅವನ ತಂದೆಯನ್ನು, <<ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?>> ಎಂದು ಕೇಳಿದಾಗ ಅವನು, <<ಚಿಕ್ಕಂದಿನಲ್ಲಿಯೇ ಬಂದಿದೆ;
|
|
\v 22 ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು>> ಅಂದನು.
|
|
\s5
|
|
\v 23 ಯೇಸು ಅವನಿಗೆ, << <ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ>? ನಂಬುವವನಿಗೆ ಎಲ್ಲವೂ ಸಾಧ್ಯ!>> ಎಂದು ಹೇಳಿದನು.
|
|
\v 24 ಕೂಡಲೆ ಆ ಹುಡುಗನ ತಂದೆಯು, <<ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು>> ಎಂದು ಕೂಗಿ ಹೇಳಿದನು.
|
|
\v 25 ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, <<ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ>> ಅಂದನು.
|
|
\s5
|
|
\v 26 ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, <<ಸತ್ತುಹೋದನು>> ಎಂದು ಅಂದುಕೊಂಡರು.
|
|
\v 27 ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
|
|
\s5
|
|
\p
|
|
\v 28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, <<ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು>> ಆತನನ್ನು ಏಕಾಂತದಲ್ಲಿ ಕೇಳಿದರು.
|
|
\v 29 ಅದಕ್ಕೆ ಆತನು, <<ಈ ಬಗೆಯ ದೆವ್ವಗಳು ದೇವರ
|
|
\f +
|
|
\fr 9:29
|
|
\ft ಕೆಲವು ಮೂಲಪ್ರತಿಗಳಲ್ಲಿ ಉಪವಾಸ ಹಾಗೂ ಪ್ರಾರ್ಥನೆಯಿಂದ ಎಂದು ಬರೆಯಲಾಗಿದೆ.
|
|
\f* ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು>> ಅವರಿಗೆ ಹೇಳಿದನು.
|
|
\s1 ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು
|
|
\r (ಮತ್ತಾ. 17:22-23; ಲೂಕ 9:43-45)
|
|
\s5
|
|
\p
|
|
\v 30 ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
|
|
\v 31
|
|
\f +
|
|
\fr 9:31
|
|
\ft ಹೋಶೇ. 6:2:
|
|
\f* ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, <<ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು>> ಹೇಳಿದನು.
|
|
\v 32 ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
|
|
\s1 ಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದು
|
|
\r (ಮತ್ತಾ. 18:1-9; ಲೂಕ 9:46-50)
|
|
\s5
|
|
\p
|
|
\v 33 ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, <<ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?>> ಎಂದು ಶಿಷ್ಯರನ್ನು ಕೇಳಿದನು.
|
|
\v 34 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
|
|
\v 35 ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, <<ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು>> ಎಂದು ಹೇಳಿ,
|
|
\s5
|
|
\v 36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
|
|
\v 37 <<ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು>> ಎಂದು ಹೇಳಿದನು.
|
|
\s ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ
|
|
\s5
|
|
\p
|
|
\v 38 ಯೋಹಾನನು ಆತನಿಗೆ, <<ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು>> ಎಂದು ಹೇಳಿದನು.
|
|
\v 39 ಅದಕ್ಕೆ ಯೇಸು, <<ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
|
|
\s5
|
|
\v 40 ನಮಗೆ
|
|
\f +
|
|
\fr 9:40
|
|
\ft ಮತ್ತಾ. 12:30.
|
|
\f* ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
|
|
\v 41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ
|
|
\f +
|
|
\fr 9:41
|
|
\ft ಮತ್ತಾ. 10:42:
|
|
\f* ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ>> ಹೇಳುತ್ತೇನೆ.
|
|
\s ಪಾಪಕ್ಕೆ ಪ್ರೇರಣೆ
|
|
\s5
|
|
\p
|
|
\v 42 ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
|
|
\v 43-44 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ
|
|
\f +
|
|
\fr 9:43-44
|
|
\ft 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ.
|
|
\f* ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
|
|
\s5
|
|
\v 45-46 ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
|
|
\s5
|
|
\v 47 ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.
|
|
\v 48 ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
|
|
\s5
|
|
\p
|
|
\v 49 <<ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
|
|
\v 50 ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ
|
|
\f +
|
|
\fr 9:50
|
|
\ft ಉಪ್ಪಿನಂತೆ ಒಬ್ಬರಿಗೊಬ್ಬರು ಒಳ್ಳೆಯದನ್ನು ಮಾಡಿರಿ.
|
|
\f* ಉಪ್ಪ ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.>>
|
|
|
|
\s5
|
|
\c 10
|
|
\s1 ವಿವಾಹ ವಿಚ್ಛೇದನ
|
|
\r (ಮತ್ತಾ. 19:1-9; ಲೂಕ 16:18)
|
|
\p
|
|
\v 1 ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
|
|
\v 2 ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು.
|
|
\v 3 ಅದಕ್ಕೆ ಆತನು <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಎಂದನು.
|
|
\v 4 ಅದಕ್ಕೆ ಅವರು,
|
|
\f +
|
|
\fr 10:4
|
|
\ft ಧರ್ಮೋ. 24:1.
|
|
\f* <<ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು>> ಅಂದರು.
|
|
\s5
|
|
\p
|
|
\v 5 ಆದರೆ ಯೇಸು ಅವರಿಗೆ, <<ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.
|
|
\v 6 ದೇವರಾದರೋ ಸೃಷ್ಟಿಯ ಮೊದಲಿನಿಂದಲೇ
|
|
\f +
|
|
\fr 10:6
|
|
\ft ಆದಿ. 1:27:
|
|
\f* ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.
|
|
\s5
|
|
\v 7
|
|
\f +
|
|
\fr 10:7
|
|
\ft ಆದಿ. 2:24:
|
|
\f* ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
|
|
\v 8 ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
|
|
\v 9 ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು>> ಎಂದು ಹೇಳಿದನು.
|
|
\s5
|
|
\p
|
|
\v 10 ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.
|
|
\v 11 ಅದಕ್ಕೆ ಆತನು,
|
|
\f +
|
|
\fr 10:11
|
|
\ft ಮತ್ತಾ. 5:32:
|
|
\f* <<ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
|
|
\v 12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ>> ಎಂದು ಹೇಳಿದನು.
|
|
\s1 ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
|
|
\r (ಮತ್ತಾ. 19:13-15; ಲೂಕ 18:15-17)
|
|
\s5
|
|
\p
|
|
\v 13 ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
|
|
\v 14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, <<ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
|
|
\s5
|
|
\v 15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ>> ಎಂದು ಹೇಳಿದನು.
|
|
\v 16 ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
|
|
\s1 ಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹ
|
|
\r (ಮತ್ತಾ. 19:16-30; ಲೂಕ 18:18-30)
|
|
\s5
|
|
\p
|
|
\v 17 ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, <<ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು>> ಆತನನ್ನು ಕೇಳಿದನು.
|
|
\v 18 ಯೇಸು ಅವನಿಗೆ, <<ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.
|
|
\v 19
|
|
\f +
|
|
\fr 10:19
|
|
\ft ವಿಮೋ. 20:12-16:
|
|
\f* ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ>> ಎಂದು ಹೇಳಿದನು.
|
|
\s5
|
|
\v 20 ಅವನು ಆತನಿಗೆ, <<ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ>> ಎಂದು ಹೇಳಲು,
|
|
\v 21 ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, <<ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.
|
|
\v 22 ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
|
|
\s5
|
|
\v 23 ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, <<ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ>> ಎಂದು ಹೇಳಿದನು.
|
|
\v 24 ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, <<ಮಕ್ಕಳೇ,
|
|
\f +
|
|
\fr 10:24
|
|
\ft ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28:
|
|
\f* ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
|
|
\v 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ>> ಎಂದು ಹೇಳಿದನು.
|
|
\s5
|
|
\v 26 ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, <<ಹಾಗಾದರೆ ಯಾರಿಗೆ ರಕ್ಷಣೆಯಾದೀತು>> ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
|
|
\v 27 ಯೇಸು ಅವರನ್ನು ದೃಷ್ಟಿಸಿ ನೋಡಿ
|
|
\f +
|
|
\fr 10:27
|
|
\ft ಲೂಕ 1:37; ರೋಮಾ. 4:21:
|
|
\f* <<ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ>> ಅಂದನು.
|
|
\v 28 ಪೇತ್ರನು ಆತನಿಗೆ, <<ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ>> ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
|
|
\s5
|
|
\v 29 ಅದಕ್ಕೆ ಯೇಸು, <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
|
|
\v 30 ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
|
|
\v 31 ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು>> ಎಂದು ಹೇಳಿದನು.
|
|
\s1 ಯೇಸು ತನ್ನ ಮರಣ ಪುನರುತ್ಥಾನವನ್ನು ಮೂರನೆಯ ಸಾರಿ ಮುಂದಾಗಿ ತಿಳಿಸಿದ್ದು
|
|
\r (ಮತ್ತಾ. 20:17-19; ಲೂಕ 18:31-34)
|
|
\s5
|
|
\p
|
|
\v 32 ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
|
|
\v 33 ಅವರಿಗೆ, <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
|
|
\v 34 ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ
|
|
\f +
|
|
\fr 10:34
|
|
\ft ಹೋಶೇ. 6:2:
|
|
\f* ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.
|
|
\s1 ಜೆಬೆದಾಯನ ಮಕ್ಕಳ ಬಿನ್ನಹ
|
|
\r (ಮತ್ತಾ. 20:20-28)
|
|
\s5
|
|
\p
|
|
\v 35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, <<ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು>> ಹೇಳಿದರು.
|
|
\v 36 ಅದಕ್ಕೆ ಆತನು ಅವರಿಗೆ, <<ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?>> ಎಂದು ಕೇಳಲು,
|
|
\v 37 ಅವರು ಆತನಿಗೆ, <<ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು>> ಅಂದರು.
|
|
\s5
|
|
\v 38 ಆದರೆ ಯೇಸು ಅವರಿಗೆ, <<ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.
|
|
\f +
|
|
\fr 10:38
|
|
\ft ಯೋಹಾ. 18:11:
|
|
\f* ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ?
|
|
\f +
|
|
\fr 10:38
|
|
\ft ಲೂಕ. 12:50.
|
|
\f* ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?>> ಎಂದು ಕೇಳಲು ಅವರು <<ನಮ್ಮಿಂದಾಗುವುದು>> ಅಂದರು.
|
|
\v 39 ಆಗ ಯೇಸು ಅವರಿಗೆ, <<ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
|
|
\v 40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು>> ಎಂದು ಹೇಳಿದನು.
|
|
\s5
|
|
\v 41 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
|
|
\v 42 ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
|
|
\s5
|
|
\v 43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.
|
|
\v 44 ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.
|
|
\v 45 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ
|
|
\f +
|
|
\fr 10:45
|
|
\ft 1 ತಿಮೊ. 2:6:
|
|
\f* ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು>> ಎಂದು ಹೇಳಿದನು.
|
|
\s1 ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ
|
|
\r (ಮತ್ತಾ. 20:29-34; ಲೂಕ 18:35-43)
|
|
\s5
|
|
\p
|
|
\v 46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
|
|
\v 47 ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವುದು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, <<ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು>> ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
|
|
\v 48 ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, <<ದಾವೀದನ ಕುಮಾರನೇ ನನ್ನನ್ನು ಕರುಣಿಸು>> ಎಂದು ಮತ್ತಷ್ಟು ಕೂಗಿಕೊಂಡನು.
|
|
\s5
|
|
\v 49 ಆಗ ಯೇಸು ನಿಂತು, <<ಅವನನ್ನು ಕರೆಯಿರಿ>> ಅನ್ನಲು ಅವರು ಆ ಕುರುಡನನ್ನು ಕರೆದು, <<ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ>> ಅಂದರು.
|
|
\v 50 ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
|
|
\s5
|
|
\v 51 ಯೇಸು ಅವನನ್ನು, <<ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ>> ಎಂದು ಕೇಳಲು ಆ ಕುರುಡನು, <<ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು>> ಅಂದನು.
|
|
\v 52 ಯೇಸು ಅವನಿಗೆ, <<ಹೋಗು,
|
|
\f +
|
|
\fr 10:52
|
|
\ft ಮಾರ್ಕ. 5:34; ಲೂಕ 7:50; 17:19; ಅ. ಕೃ. 14:9:
|
|
\f* ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ>> ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
|
|
|
|
\s5
|
|
\c 11
|
|
\s1 ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು
|
|
\r (ಮತ್ತಾ. 21:1-9; ಲೂಕ 19:29-38; ಯೋಹಾ. 12:12-16)
|
|
\p
|
|
\v 1 ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
|
|
\v 2 <<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
|
|
\v 3 ಯಾರಾದರೂ ನಿಮ್ಮನ್ನು, <ಅದನ್ನೇಕೆ ಬಿಚ್ಚುತ್ತೀರಿ?> ಎಂದು ಕೇಳಿದರೆ, <ಇದು ಕರ್ತನಿಗೆ ಅಗತ್ಯವಾಗಿದೆ> ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು>> ಎಂದು ಹೇಳಿ ಕಳುಹಿಸಿದನು.
|
|
\s5
|
|
\v 4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.
|
|
\v 5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, <<ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದರು.
|
|
\v 6 ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
|
|
\s5
|
|
\v 7 ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
|
|
\v 8 ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
|
|
\v 9 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು:
|
|
\q1 <<ಹೊಸನ್ನ,
|
|
\f +
|
|
\fr 11:9
|
|
\ft ಕೀರ್ತ. 118:25, 26:
|
|
\f* ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
|
|
\q1
|
|
\v 10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ;
|
|
\q1 ಮೇಲಣ ಲೋಕಗಳಲ್ಲಿ ಹೊಸನ್ನ>> ಎಂದು ಆರ್ಭಟಿಸಿದರು.
|
|
\s5
|
|
\p
|
|
\v 11 ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.
|
|
\s1 ಯೇಸು ಅಂಜೂರದ ಮರವನ್ನು ಶಪಿಸಿದ್ದು
|
|
\r (ಮತ್ತಾ. 21:12-22; ಲೂಕ 19:45-48)
|
|
\p
|
|
\v 12 ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.
|
|
\s5
|
|
\v 13 ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
|
|
\v 14 ಆಗ ಯೇಸು ಆ ಮರಕ್ಕೆ, <<ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ>> ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.
|
|
\s ದೇವಾಲಯದ ಶುದ್ಧೀಕರಣ
|
|
\s5
|
|
\p
|
|
\v 15
|
|
\f +
|
|
\fr 11:15
|
|
\ft ಯೋಹಾ 2:14-16:
|
|
\f* ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
|
|
\v 16 ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
|
|
\s5
|
|
\v 17 ಮತ್ತು ಆತನು ಉಪದೇಶಮಾಡಿ,
|
|
\q1
|
|
\f +
|
|
\fr 11:17
|
|
\ft ಯೆಶಾ. 56:7:
|
|
\f* << <ನನ್ನ ಆಲಯವು ಎಲ್ಲಾ ಜನಾಂಗಗಳಿಗೂ
|
|
\q2 ಪ್ರಾರ್ಥನಾಲಯವೆನಿಸಿಕೊಳ್ಳುವುದು>
|
|
\m ಎಂದು ಬರೆದಿದೆಯಲ್ಲಾ? ಆದರೆ
|
|
\f +
|
|
\fr 11:17
|
|
\ft ಯೆರೆ. 7:11:
|
|
\f* <ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ> >> ಎಂದು ಹೇಳಿದನು.
|
|
\v 18 ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
|
|
\p
|
|
\v 19 ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
|
|
\s ನಿಸ್ಸಂದೇಹವಾದ ನಂಬಿಕೆ
|
|
\s5
|
|
\p
|
|
\v 20 ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
|
|
\v 21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, <<ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ>> ಎಂದು ಹೇಳಿದ್ದಕ್ಕೆ
|
|
\s5
|
|
\v 22 ಯೇಸು ಹೇಳಿದ್ದೇನಂದರೆ, <<ನಿಮಗೆ ದೇವರಲ್ಲಿ ನಂಬಿಕೆಯಿರಲಿ.
|
|
\v 23 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, <ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!> ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
|
|
\s5
|
|
\v 24 ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
|
|
\v 25 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು>> ಅಂದನು.
|
|
\v 26
|
|
\f +
|
|
\fr 11:26
|
|
\ft ಕೆಲವು ಪ್ರತಿಗಳಲ್ಲಿ 26 ನೆಯ ವಚನವಿಲ್ಲ. ಮತ್ತಾ. 6:14, 15; 18:35:
|
|
\f* ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
|
|
\s1 ಯೇಸುವಿನ ಅಧಿಕಾರವನ್ನು ಪ್ರಶ್ನಿಸಿದ್ದು
|
|
\r (ಮತ್ತಾ. 21:23-46; ಲೂಕ 20:1-19)
|
|
\s5
|
|
\p
|
|
\v 27 ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
|
|
\v 28 <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?>> ಎಂದು ಆತನನ್ನು ಕೇಳಿದರು.
|
|
\s5
|
|
\v 29 ಯೇಸು ಅವರಿಗೆ, <<ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
|
|
\v 30 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?>> ಉತ್ತರಕೊಡಿರಿ ಅಂದನು.
|
|
\s5
|
|
\v 31 ಆಗ ಅವರು, << <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ, <ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ> ಅಂದಾನು;
|
|
\v 32 <ಮನುಷ್ಯರಿಂದ ಬಂದಿತು> >> ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
|
|
\v 33 ಹೀಗಿರಲಾಗಿ ಅವರು, <<ನಮಗೆ ಗೊತ್ತಿಲ್ಲ>> ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, <<ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ>> ಅಂದನು.
|
|
|
|
\s5
|
|
\c 12
|
|
\s ದ್ರಾಕ್ಷಿಯ ತೋಟದ ಸಾಮ್ಯ
|
|
\p
|
|
\v 1 ಆಗ ಯೇಸು ಅವರೊಂದಿಗೆ
|
|
\f +
|
|
\fr 12:1
|
|
\ft ಮಾರ್ಕ 4:2:
|
|
\f* ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, <<ಒಬ್ಬ ಮನುಷ್ಯನು
|
|
\f +
|
|
\fr 12:1
|
|
\ft ಯೆಶಾ. 5:1, 2
|
|
\f* ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ
|
|
\f +
|
|
\fr 12:1
|
|
\ft ಕಾವಲು ಗೋಪುರವನ್ನು
|
|
\f* ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷೆಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
|
|
\v 2 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
|
|
\v 3 ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
|
|
\s5
|
|
\v 4 ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
|
|
\v 5 ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
|
|
\s5
|
|
\v 6 ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
|
|
\v 7 ಆದರೆ ಆ ಗುತ್ತಿಗೆದಾರರು, <ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು> ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
|
|
\s5
|
|
\v 8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
|
|
\v 9 ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
|
|
\s5
|
|
\q1
|
|
\v 10 << <
|
|
\f +
|
|
\fr 12:10
|
|
\ft ಕೀರ್ತ. 118:22, 23
|
|
\f* ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ
|
|
\q2 ಮುಖ್ಯವಾದ ಮೂಲೆಗಲ್ಲಾಯಿತು.
|
|
\q1
|
|
\v 11 ಇದು ಕರ್ತನಿಂದಲೇ ಆಯಿತು,
|
|
\q2 ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?> >> ಎಂದನು.
|
|
\p
|
|
\v 12 ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
|
|
\s1 ಕೈಸರನಿಗೆ ತೆರಿಗೆ ಕೊಡುವ ವಿಷಯ
|
|
\r (ಮತ್ತಾ. 22:15-46; ಲೂಕ 20:20-44)
|
|
\s5
|
|
\p
|
|
\v 13 ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
|
|
\v 14 ಇವರು ಬಂದು, <<ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು.
|
|
\f +
|
|
\fr 12:14
|
|
\ft ಅಂದರೆ, ರೋಮ್ ಸಾಮ್ರಾಜ್ಯದ ಚಕ್ರವರ್ತಿಗೆ.
|
|
\f* ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?>> ಎಂದು ಆತನನ್ನು ಕೇಳಿದರು.
|
|
\v 15 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, <<ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ>> ಎಂದು ಹೇಳಲು ಅವರು ತಂದರು.
|
|
\s5
|
|
\v 16 ಆಗ ಆತನು ಇದರ <<ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?>> ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
|
|
\v 17 ಯೇಸು, <<ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ>> ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
|
|
\s ಪುನರುತ್ಥಾನದ ಕುರಿತಾದ ಪ್ರಶ್ನೆ
|
|
\s5
|
|
\p
|
|
\v 18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
|
|
\v 19 ಆತನನ್ನು ಪ್ರಶ್ನೆಮಾಡಿದ್ದೇನಂದರೆ, <<ಬೋಧಕನೇ,
|
|
\f +
|
|
\fr 12:19
|
|
\ft ಧರ್ಮೋ. 25:5:
|
|
\f* <ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು> ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
|
|
\s5
|
|
\p
|
|
\v 20 <<ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
|
|
\v 21 ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
|
|
\v 22 ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
|
|
\v 23 ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ>> ಎಂದರು.
|
|
\s5
|
|
\v 24 ಅದಕ್ಕೆ ಯೇಸು, <<ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
|
|
\v 25 ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
|
|
\s5
|
|
\v 26 ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ
|
|
\f +
|
|
\fr 12:26
|
|
\ft ವಿಮೋ. 3:6:
|
|
\f* <ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?>
|
|
\v 27 ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ>> ಎಂದು ಹೇಳಿದನು.
|
|
\s ಮುಖ್ಯವಾದ ಆಜ್ಞೆ
|
|
\s5
|
|
\p
|
|
\v 28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, <<ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?>> ಎಂದು ಆತನನ್ನು ಕೇಳಿದರು.
|
|
\v 29 ಅದಕ್ಕೆ ಯೇಸು,
|
|
\f +
|
|
\fr 12:29
|
|
\ft ಧರ್ಮೋ. 6:4, 5:
|
|
\f* << <ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು
|
|
\f +
|
|
\fr 12:29
|
|
\ft ಅಥವಾ:ಅದ್ವಿತೀಯನು. ಮೂಲ:ಒಬ್ಬನೇ ಕರ್ತನು.
|
|
\f* ಒಬ್ಬನೇ ದೇವರು.
|
|
\v 30 ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು> ಎಂಬುದೇ ಮುಖ್ಯವಾದ ಆಜ್ಞೆ.
|
|
\v 31
|
|
\f +
|
|
\fr 12:31
|
|
\ft ಯಾಜ. 19:18:
|
|
\f* <ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು> ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ>> ಎಂದು ಉತ್ತರ ಕೊಟ್ಟನು.
|
|
\s5
|
|
\v 32 ಆಗ ಆ ಶಾಸ್ತ್ರಿಯು, <<ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ,
|
|
\f +
|
|
\fr 12:32
|
|
\ft ಧರ್ಮೋ. 4:35:
|
|
\f* ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
|
|
\v 33 ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ
|
|
\f +
|
|
\fr 12:33
|
|
\ft 1 ಸಮು. 15:22:
|
|
\f* ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು>> ಅಂದನು.
|
|
\p
|
|
\v 34 ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, <<ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ>> ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
|
|
\s ದಾವೀದಕುಮಾರನ ಕುರಿತಾದ ಪ್ರಶ್ನೆ
|
|
\s5
|
|
\p
|
|
\v 35 ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, <<ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? ಎಂದು ಪ್ರಶ್ನಿಸಿದನು.
|
|
\q1
|
|
\v 36
|
|
\f +
|
|
\fr 12:36
|
|
\ft ಕೀರ್ತ. 110:1:
|
|
\f* << <ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ
|
|
\q1 ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು
|
|
\q1 ಕರ್ತನು ನನ್ನ ಒಡೆಯನಿಗೆ ನುಡಿದನು> ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
|
|
\m
|
|
\v 37 ದಾವೀದನೇ ಆತನನ್ನು <ಕರ್ತನೆಂದು> ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?>> ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
|
|
\s1 ಯೇಸು ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆ ಹೇಳಿದ್ದು
|
|
\r (ಮತ್ತಾ. 23; ಲೂಕ 20:45-47)
|
|
\s5
|
|
\p
|
|
\v 38 ಆತನು ಉಪದೇಶಮಾಡಿ ಹೇಳಿದ್ದೇನಂದರೆ, <<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
|
|
\v 39 ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
|
|
\v 40 ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು>> ಎಂದನು.
|
|
\s1 ವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆ
|
|
\r (ಲೂಕ 21:1-4)
|
|
\s5
|
|
\p
|
|
\v 41 ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
|
|
\v 42 ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
|
|
\s5
|
|
\v 43 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
|
|
\v 44 ಹೇಗಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ>> ಎಂದನು.
|
|
|
|
\s5
|
|
\c 13
|
|
\s1 ಯುಗದ ಸಮಾಪ್ತಿಯ ಗುರುತುಗಳು
|
|
\r (ಮತ್ತಾ. 24; ಲೂಕ 21:5-36)
|
|
\p
|
|
\v 1 ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, <<ಗುರುವೇ, ನೋಡು, ಎಂಥಾ
|
|
\f +
|
|
\fr 13:1
|
|
\ft ಭಾರಿ, ಅಥವಾ ದೊಡ್ಡ.
|
|
\f* ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!>> ಎಂದು ಹೇಳಿದನು.
|
|
\v 2 ಯೇಸು, <<ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು>> ಎಂದನು.
|
|
\s5
|
|
\p
|
|
\v 3 ಬಳಿಕ ಆತನು
|
|
\f +
|
|
\fr 13:3
|
|
\ft ಆಲಿವ್ ಮರಗಳ ಗುಡ್ಡ.
|
|
\f* ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
|
|
\v 4 ಇವರು ಪ್ರತ್ಯೇಕವಾಗಿ ಆತನಿಗೆ, <<ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು>> ಎಂದು ಆತನನ್ನು ಕೇಳಿದರು.
|
|
\s5
|
|
\v 5 ಯೇಸು ಅವರಿಗೆ ಹೇಳಿದ್ದೇನಂದರೆ, <<ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
|
|
\v 6 ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು,
|
|
\f +
|
|
\fr 13:6
|
|
\ft ನಾನೇ ಆತನಾಗಿದ್ದೇನೆ
|
|
\f* <ನಾನೇ ಕ್ರಿಸ್ತನು> ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
|
|
\s5
|
|
\v 7 ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳ ಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
|
|
\v 8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ (ನೂತನಕಾಲ ಹುಟ್ಟುವ ಗುರುತು).
|
|
\s5
|
|
\p
|
|
\v 9 <<ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
|
|
\v 10 ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
|
|
\s5
|
|
\p
|
|
\v 11 ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
|
|
\v 12 ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
|
|
\v 13 ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.>>
|
|
\s5
|
|
\p
|
|
\v 14 <<ಇದಲ್ಲದೆ
|
|
\f +
|
|
\fr 13:14
|
|
\ft ದಾನಿ. 9:27; 12:11:
|
|
\f* ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
|
|
\v 15 ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
|
|
\v 16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
|
|
\s5
|
|
\p
|
|
\v 17 ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
|
|
\v 18 ಆ ದಿವಸಗಳು
|
|
\f +
|
|
\fr 13:18
|
|
\ft ದಾನಿ. 12:1:
|
|
\f* ಸಂಕಟದ ದಿವಸಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
|
|
\v 19 ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
|
|
\v 20 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
|
|
\s5
|
|
\p
|
|
\v 21 ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
|
|
\v 22 ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
|
|
\v 23 ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ>> ಹೇಳಿದ್ದೇನೆ.
|
|
\s5
|
|
\p
|
|
\v 24 ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;
|
|
\q1
|
|
\f +
|
|
\fr 13:24
|
|
\ft ಯೆಶಾ. 13:10; 34:4:
|
|
\f* << <ಸೂರ್ಯನು ಕತ್ತಲಾಗಿ ಹೋಗುವನು.
|
|
\q1
|
|
\v 25 ಚಂದ್ರನು ತನ್ನ ಬೆಳಕು ಕೊಡದೆ ಇರುವನು.
|
|
\q1 ನಕ್ಷತ್ರಗಳು ಆಕಾಶದಿಂದ ಬೀಳುವವು.
|
|
\q1 ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.>
|
|
\m
|
|
\v 26 ಆಗ
|
|
\f +
|
|
\fr 13:26
|
|
\ft ದಾನಿ. 7:13, 14:
|
|
\f* ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
|
|
\v 27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.>>
|
|
\s ಅಂಜೂರ ಮರದ ಪಾಠ
|
|
\s5
|
|
\p
|
|
\v 28 <<ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
|
|
\v 29 ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
|
|
\s5
|
|
\v 30 ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
|
\v 31 ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.>>
|
|
\s ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
|
|
\p
|
|
\v 32 <<ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
|
|
\s5
|
|
\v 33 ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು
|
|
\f +
|
|
\fr 13:33
|
|
\ft ಮಾರ್ಕ. 14:38; ಮತ್ತಾ. 26:41; ಎಫೆ. 6:18:
|
|
\f* ಎಚ್ಚರವಾಗಿರಿ,
|
|
\f +
|
|
\fr 13:33
|
|
\ft ಕೆಲವು ಪ್ರತಿಗಳಲ್ಲಿ ಜಾಗರೂಕರಾಗಿರಿ, ದೇವರನ್ನು ಪ್ರಾರ್ಥಿಸಿರಿ.
|
|
\f* ಜಾಗರೂಕರಾಗಿರಿ.
|
|
\v 34 ಅದು
|
|
\f +
|
|
\fr 13:34
|
|
\ft ಮತ್ತಾ. 25:14; ಲೂಕ. 19:12:
|
|
\f* ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
|
|
\s5
|
|
\p
|
|
\v 35 ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
|
|
\v 36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
|
|
\v 37 ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!>> ಎಂದನು.
|
|
|
|
\s5
|
|
\c 14
|
|
\s1 ಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದು
|
|
\r (ಮತ್ತಾ. 26:1-16; ಲೂಕ 22:1-6; ಯೋಹಾ. 11:47-53; 12:1-8)
|
|
\p
|
|
\v 1 ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
|
|
\v 2 <<ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು>> ಎಂದು ಮಾತನಾಡಿಕೊಂಡರು.
|
|
\s5
|
|
\p
|
|
\v 3 ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
|
|
\v 4 ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, <<ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?
|
|
\v 5 ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?>> ಎಂದು ಹೇಳಿ ಆಕೆಯನ್ನು ದೂಷಿಸಿದರು.
|
|
\s5
|
|
\p
|
|
\v 6 ಆದರೆ ಯೇಸು, <<ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
|
|
\v 7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
|
|
\v 8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
|
|
\v 9 ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು.
|
|
\s5
|
|
\p
|
|
\v 10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
|
|
\v 11 ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
|
|
\s1 ಯೇಸು ತನ್ನ ಶಿಷ್ಯರ ಸಂಗಡ ಕಡೆ ಬೋಜನವನ್ನು ಮಾಡಿದ್ದು
|
|
\r (ಮತ್ತಾ. 26:17-29; ಲೂಕ 22:7-23; ಯೋಹಾ. 13:21-29)
|
|
\s5
|
|
\p
|
|
\v 12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, <<ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು>> ಎಂದು ಕೇಳಿದರು.
|
|
\v 13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, <<ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
|
|
\v 14 ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, <ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?> ಎಂಬುದಾಗಿ ಕೇಳುತ್ತಿದ್ದಾನೆ, ಎಂದು ಹೇಳಿರಿ.
|
|
\s5
|
|
\p
|
|
\v 15 ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
|
|
\v 16 ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
|
|
\s5
|
|
\p
|
|
\v 17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
|
|
\v 18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, <<ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು.
|
|
\v 19 ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ <<ನಾನಲ್ಲವಲ್ಲಾ?>> ಎಂದು ಕೇಳತೊಡಗಿದರು.
|
|
\s5
|
|
\p
|
|
\v 20 ಆತನು ಉತ್ತರವಾಗಿ ಅವರಿಗೆ <<ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
|
|
\v 21 ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು>> ಅಂದನು.
|
|
\s5
|
|
\p
|
|
\v 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ>> ಎಂದನು.
|
|
\v 23 ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
|
|
\v 24 ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ
|
|
\f +
|
|
\fr 14:24
|
|
\ft ಕೆಲವು ಪ್ರತಿಗಳಲ್ಲಿ, ಹೊಸ ಒಡಂಬಡಿಕೆಯ ರಕ್ತ ಎಂದು ಬರೆದಿದೆ. ವಿಮೋ. 24:8; ಯೆರೆ. 31:31; ಜೆಕ. 9:11:
|
|
\f* ಒಡಂಬಡಿಕೆಯ ರಕ್ತ.
|
|
\v 25 ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು.
|
|
\s1 ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು
|
|
\r (ಮತ್ತಾ. 26:30-36; ಲೂಕ 22:31-53; ಯೋಹಾ. 13:36-38; 18:1-11)
|
|
\s5
|
|
\p
|
|
\v 26 ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
|
|
\v 27 ಆಗ ಯೇಸು ಅವರಿಗೆ, <<ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ;
|
|
\q1 << <ನಾನು
|
|
\f +
|
|
\fr 14:27
|
|
\ft ಜೆಕ. 13:7:
|
|
\f* ಕುರುಬನನ್ನು ಹೊಡೆಯುವೆನು;
|
|
\q1 ಕುರಿಗಳು ಚದರಿ ಹೋಗುವವು> ಎಂದು ಬರೆದಿದೆಯಲ್ಲಾ ಅಂದನು.
|
|
\m
|
|
\s5
|
|
\v 28 ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು>> ಎಂದು ಹೇಳಿದನು.
|
|
\v 29 ಪೇತ್ರನು ಯೇಸುವಿಗೆ, <<ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಿದನು.
|
|
\s5
|
|
\p
|
|
\v 30 ಯೇಸುವು ಆತನಿಗೆ, <<ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ
|
|
\f +
|
|
\fr 14:30
|
|
\ft ಮಾರ್ಕ. 14:68,72:
|
|
\f* ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ>> ಎಂದನು.
|
|
\v 31 ಆದರೆ ಅವನು, <<ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು>> ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
|
|
\s ಗೆತ್ಸೇಮನೆಯಲ್ಲಿ ಯೇಸುವಿನ ಪ್ರಾರ್ಥನೆ
|
|
\s5
|
|
\p
|
|
\v 32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, <<ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ>> ಎಂದು ಹೇಳಿದನು.
|
|
\v 33 ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
|
|
\v 34 ಮತ್ತು ಆತನು ಅವರಿಗೆ <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ>> ಎಂದು ಹೇಳಿದನು.
|
|
\s5
|
|
\v 35 ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
|
|
\v 36 <<ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ>> ಎಂದನು.
|
|
\s5
|
|
\v 37 ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, <<ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
|
|
\v 38 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು>> ಎಂದು ಹೇಳಿದನು.
|
|
\v 39 ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.
|
|
\s5
|
|
\p
|
|
\v 40 ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
|
|
\v 41 ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, <<ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
|
|
\v 42 ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ>> ಎಂದು ಹೇಳಿದನು.
|
|
\s ಯೇಸುವಿನ ಬಂಧನ
|
|
\s5
|
|
\p
|
|
\v 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
|
|
\v 44 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ>> ಎಂದು ಮೊದಲೇ ಸೂಚನೆಕೊಟ್ಟಿದ್ದನು.
|
|
\v 45 ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಟ್ಟನು.
|
|
\v 46 ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
|
|
\s5
|
|
\p
|
|
\v 47 ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
|
|
\v 48 ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?
|
|
\v 49 ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು.
|
|
\v 50 ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.
|
|
\s5
|
|
\p
|
|
\v 51 ಆಗ ಯುವಕನೊಬ್ಬನು ಮೈಮೇಲೆ
|
|
\f +
|
|
\fr 14:51
|
|
\ft ಹೊದಿಕೆ ಬಟ್ಟೆ.
|
|
\f* ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
|
|
\v 52 ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
|
|
\s1 ಯೇಸು ಹಿರೀಸಭೆಯವರ ಮುಂದೆ
|
|
\r (ಮತ್ತಾ. 26:57-75; ಲೂಕ 22:54-71; ಯೋಹಾ. 18:12-27)
|
|
\s5
|
|
\p
|
|
\v 53 ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ , ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
|
|
\v 54 ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
|
|
\s5
|
|
\p
|
|
\v 55 ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
|
|
\v 56 ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
|
|
\s5
|
|
\p
|
|
\v 57-58 ತರುವಾಯ ಕೆಲವರು ಎದ್ದು ನಿಂತು, << <ಇವನು
|
|
\f +
|
|
\fr 14:57-58
|
|
\ft ಮಾರ್ಕ. 15:29; ಯೋಹಾ 2:19:
|
|
\f* ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
|
|
\v 59 ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
|
|
\s5
|
|
\p
|
|
\v 60 ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, <<ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?>> ಎಂದು ಯೇಸುವನ್ನು ಕೇಳಿದನು.
|
|
\v 61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, <<ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?>> ಎಂದು ಆತನನ್ನು ಕೇಳಿದನು.
|
|
\p
|
|
\v 62 ಯೇಸುವು <<ಹೌದು ನಾನೇ!
|
|
\q1 <<ಇದಲ್ಲದೆ
|
|
\f +
|
|
\fr 14:62
|
|
\ft ದಾನಿ. 3:13; ಕೀರ್ತ. 110:1; ಮತ್ತಾ. 24:30.
|
|
\f* ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ,
|
|
\q2 ಆಕಾಶದ ಮೇಘಗಳಲ್ಲಿ ಬರುವುದನ್ನೂ
|
|
\q2 ನೀವು ನೋಡುವಿರಿ>> ಎಂದನು.
|
|
\s5
|
|
\p
|
|
\v 63 ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?
|
|
\v 64 ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
|
|
\v 65 ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
|
|
\s ಪೇತ್ರನ ನಿರಾಕರಣೆ
|
|
\s5
|
|
\p
|
|
\v 66 ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
|
|
\v 67 ಅವನನ್ನು ದೃಷ್ಟಿಸಿ ನೋಡಿ, <<ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು>> ಎಂದಳು.
|
|
\v 68 ಆದರೆ ಅವನು ನಿರಾಕರಿಸಿ, <<ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!>> ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
|
|
\s5
|
|
\v 69 ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, <<ಇವನು ಅವರಲ್ಲಿ ಒಬ್ಬನು>> ಎಂದು ಹೇಳಲಾರಂಭಿಸಿದಳು.
|
|
\v 70 ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, <<ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ>> ಎಂದರು.
|
|
\s5
|
|
\p
|
|
\v 71 ಆದರೆ ಅವನು, <<ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ>> ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
|
|
\v 72 ಆಗ ಪೇತ್ರನು, <<ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ>> ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಖಃಭರಿತನಾಗಿ ಅತ್ತನು.
|
|
|
|
\s5
|
|
\c 15
|
|
\s1 ಪಿಲಾತನ ಮುಂದೆ ಯೇಸುವಿನ ವಿಚಾರಣೆ
|
|
\r (ಮತ್ತಾ. 27:12-26; ಲೂಕ 23:1-25; ಯೋಹಾ. 18:28-19:16)
|
|
\p
|
|
\v 1 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
|
|
\v 2 ಪಿಲಾತನು ಆತನನ್ನು, <<ನೀನು ಯೆಹೂದ್ಯರ ಅರಸನೋ>> ಎಂದು ಕೇಳಲು ಆತನು, <<ನೀನೇ ಹೇಳಿದ್ದೀ>> ಎಂದು ಉತ್ತರಕೊಟ್ಟನು.
|
|
\v 3 ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.
|
|
\s5
|
|
\p
|
|
\v 4 ಆಗ ಪಿಲಾತನು ಪುನಃ ಯೇಸುವನ್ನು, <<ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು>> ಎಂದು ಹೇಳಿದನು.
|
|
\v 5 ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.
|
|
\s5
|
|
\p
|
|
\v 6 ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.
|
|
\v 7 ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.
|
|
\v 8 ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.
|
|
\s5
|
|
\p
|
|
\v 9-10 ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, <<ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?>> ಎಂದು ಅವರನ್ನು ಕೇಳಿದನು.
|
|
\v 11 ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.
|
|
\s5
|
|
\p
|
|
\v 12 ಅದಕ್ಕೆ ಪಿಲಾತನು ತಿರುಗಿ ಅವರನ್ನು, <<ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?>> ಎಂದು ಕೇಳಿದನು.
|
|
\v 13 ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಮತ್ತಷ್ಟು ಕೂಗಿಕೊಂಡರು.
|
|
\s5
|
|
\v 14 ಪಿಲಾತನು, <<ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.
|
|
\v 15 ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
|
|
\s1 ಯೇಸುವನ್ನು ಪರಿಹಾಸ್ಯಮಾಡಿದ್ದು
|
|
\r (ಮತ್ತಾ. 27:27-56; ಲೂಕ 23:26-49; ಯೋಹಾ. 19:17-30)
|
|
\s5
|
|
\p
|
|
\v 16 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.
|
|
\v 17 ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.
|
|
\v 18 ಅನಂತರ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.
|
|
\s5
|
|
\p
|
|
\v 19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.
|
|
\v 20 ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
|
|
\s ಯೇಸುವನ್ನು ಶಿಲುಬೆಗೇರಿಸಿದ್ದು
|
|
\p
|
|
\v 21 ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
|
|
\s5
|
|
\v 22 ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ.
|
|
\v 23 ಅಲ್ಲಿ ಆತನಿಗೆ ರಕ್ತಬೋಳ
|
|
\f +
|
|
\fr 15:23
|
|
\ft ದೇಹದ ನೋವನ್ನು ಹೊಗಲಾಡಿಸುವ ಒಂದು ದ್ರವ್ಯ
|
|
\f* ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.
|
|
\v 24 ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.
|
|
\s5
|
|
\p
|
|
\v 25 ಆತನನ್ನು ಶಿಲುಬೆಗೆ ಹಾಕುವಾಗ
|
|
\f +
|
|
\fr 15:25
|
|
\ft ಮೂಲ:ಮೂರು ತಾಸಾಗಿತ್ತು.
|
|
\f* ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.
|
|
\v 26 <<ಈತನು ಯೆಹೂದ್ಯರ ಅರಸನು>> ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.
|
|
\v 27 ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
|
|
\p
|
|
\v 28-29
|
|
\f +
|
|
\fr 15:28-29
|
|
\ft 28 ನೆಯ ವಚನವು ಕೆಲವು ಮೂಲಪ್ರತಿಗಳಲ್ಲಿ ಇಲ್ಲ. ಯೆಶಾ. 53:12; ಲೂಕ 22:37
|
|
\f* ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ <<ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,
|
|
\v 30 ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ>> ಎಂದು ಆತನನ್ನು ಅಪಹಾಸ್ಯ ಮಾಡಿದರು.
|
|
\v 31 ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
|
|
\v 32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ>> ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
|
|
\s ಯೇಸುವಿನ ಮರಣ
|
|
\p
|
|
\v 33
|
|
\f +
|
|
\fr 15:33
|
|
\ft ಮೂಲ: ಆರು ಗಂಟೆ.
|
|
\f* ಹನ್ನೆರಡು ಗಂಟೆಯಿಂದ
|
|
\f +
|
|
\fr 15:33
|
|
\ft ಮೂಲ:ಒಂಭತ್ತು ತಾಸಿನ ತನಕ.
|
|
\f* ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
|
|
\v 34 ಮೂರು ಗಂಟೆಗೆ ಯೇಸು,
|
|
\f +
|
|
\fr 15:34
|
|
\ft ಕೀರ್ತ. 22:1:
|
|
\f* <<ಎಲೋಹಿ, ಎಲೋಹಿ, ಲಮಾಸಬಕ್ತಾನೀ?>> ಅಂದರೆ <<ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?>> ಎಂದು ಮಹಾಧ್ವನಿಯಿಂದ ಕೂಗಿದನು.
|
|
\v 35 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ>> ಅಂದರು.
|
|
\p
|
|
\v 36 ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, <<ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೊ ಕಾದು ನೋಡೋಣ>> ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.
|
|
\v 37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.
|
|
\v 38 ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
|
|
\p
|
|
\v 39 ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, <<ನಿಜವಾಗಿ ಈ ಮನುಷ್ಯನು
|
|
\f +
|
|
\fr 15:39
|
|
\ft ದಾನಿ. 3:25:
|
|
\f* ದೇವಕುಮಾರನೇ>> ಅಂದನು.
|
|
\v 40-41 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ
|
|
\f +
|
|
\fr 15:40-41
|
|
\ft ಲೂಕ. 8:2, 3:
|
|
\f* ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು,
|
|
\f +
|
|
\fr 15:40-41
|
|
\ft ಮಾರ್ಕ. 16:1:
|
|
\f* ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
|
|
\s1 ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು
|
|
\r (ಮತ್ತಾ. 27:57-61; ಲೂಕ 23:50-56; ಯೋಹಾ. 19:38-42)
|
|
\p
|
|
\v 42 ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.
|
|
\v 43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.
|
|
\v 44 ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.
|
|
\p
|
|
\v 45 ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.
|
|
\v 46 ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.
|
|
\v 47 ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.
|
|
|
|
\s5
|
|
\c 16
|
|
\s1 ಯೇಸುವಿನ ಪುನರುತ್ಥಾನ
|
|
\r (ಮತ್ತಾ. 28:1-8; ಲೂಕ 24:1-10; ಯೋಹಾ. 20:1)
|
|
\p
|
|
\v 1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
|
|
\v 2 ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
|
|
\s5
|
|
\p
|
|
\v 3 <<ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
|
|
\v 4 ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
|
|
\s5
|
|
\v 5 ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ಉಡುಪನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
|
|
\p
|
|
\v 6 ಅವನು ಅವರಿಗೆ, <<ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
|
|
\v 7 ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ>> ಎಂದು ಹೇಳಿದನು.
|
|
\s5
|
|
\p
|
|
\v 8 ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
|
|
\s5
|
|
\p
|
|
\v 9
|
|
\f +
|
|
\fr 16:9
|
|
\ft ಯೋಹಾ 20:14-18:
|
|
\f* ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
|
|
\v 10 ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.
|
|
\v 11 <<ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು>> ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.
|
|
\s1 ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು
|
|
\s5
|
|
\p
|
|
\v 12
|
|
\f +
|
|
\fr 16:12
|
|
\ft ಲೂಕ 24:13, 15
|
|
\f* ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
|
|
\v 13 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.
|
|
\s5
|
|
\p
|
|
\v 14 ಅನಂತರ
|
|
\f +
|
|
\fr 16:14
|
|
\ft ಯೋಹಾ 20:19:
|
|
\f* ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
|
|
\v 15 ಆ ಮೇಲೆ ಅವರಿಗೆ, <<
|
|
\f +
|
|
\fr 16:15
|
|
\ft ಮತ್ತಾ. 28:19:
|
|
\f* ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
|
|
\v 16 ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
|
|
\s5
|
|
\p
|
|
\v 17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
|
|
\v 18 ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು>> ಎಂದು ಹೇಳಿದನು.
|
|
\s ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು
|
|
\s5
|
|
\p
|
|
\v 19 ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ
|
|
\f +
|
|
\fr 16:19
|
|
\ft ಲೂಕ. 24:51; ಅ. ಕೃ. 1:9:
|
|
\f* ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
|
|
\v 20 ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು
|
|
\f +
|
|
\fr 16:20
|
|
\ft ಇಬ್ರಿ. 2:3, 4:
|
|
\f* ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ
|
|
\f +
|
|
\fr 16:20
|
|
\ft ಅ. ಕೃ. 5:12:
|
|
\f* ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
|
|
\f +
|
|
\fr 16:20
|
|
\ft 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ- ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ.
|
|
\f* |