\ip ಹಗ್ಗಾಯ 1:1 ರಲ್ಲಿ ಪ್ರವಾದಿಯಾದ ಹಗ್ಗಾಯನನ್ನು ಹಗ್ಗಾಯನ ಗ್ರಂಥದ ಗ್ರಂಥಕರ್ತನೆಂದು ಗುರುತಿಸಲಾಗಿದೆ. ಪ್ರವಾದಿಯಾದ ಹಗ್ಗಾಯನು ತನ್ನ ನಾಲ್ಕು ಸಂದೇಶಗಳನ್ನು ಯೆರೂಸಲೇಮಿನ ಯೆಹೂದ್ಯ ಜನರಿಗಾಗಿ ಬರೆದಿಟ್ಟಿದ್ದಾನೆ. ಹಗ್ಗಾಯ 2:3 ನೇ ವಚನವು ಪ್ರವಾದಿಯು ದೇವಾಲಯದ ನಾಶಕ್ಕೂ ಮತ್ತು ಸೆರೆವಾಸಕ್ಕೂ ಮುಂಚಿನ ಯೆರೂಸಲೇಮನ್ನು ನೋಡಿದ್ದಾನೆ ಎಂದು ಸೂಚಿಸುತ್ತದೆ, ಅಂದರೆ ಅವನು ತನ್ನ ರಾಷ್ಟ್ರದ ವೈಭವಗಳನ್ನು ಹಿಂದಿರುಗಿ ನೋಡುತ್ತಿರುವಂಥ ಹಿರಿಯ ಮನುಷ್ಯನಾಗಿದ್ದಾನೆ, ಪ್ರವಾದಿಯು ತನ್ನ ಜನರು ಸೆರೆವಾಸದ ಬೂದಿಯಿಂದ ಮೇಲೆದ್ದು ಬರುವುದನ್ನು ಮತ್ತು ರಾಷ್ಟ್ರಗಳಿಗೆ ದೇವರ ಬೆಳಕಾಗಿರುವ ತಮ್ಮ ಹಕ್ಕುಳ್ಳ ಸ್ಥಾನವನ್ನು ಮರಳಿಪಡೆದುಕೊಳ್ಳುವುದನ್ನು ಕಾಣಲು ಭಾವೋದ್ರಿಕ್ತ ಬಯಕೆಯಿಂದ ತುಂಬಲ್ಪಟ್ಟನು.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 520 ರ ಕಾಲದಲ್ಲಿ ಬರೆದಿರಬಹುದು.
\ip ಇದು ಸೆರೆವಾಸದ ನಂತರ ಬರೆದಿರುವ ಪುಸ್ತಕವಾಗಿದೆ, ಅಂದರೆ ಬಾಬಿಲೋನಿನಲ್ಲಿನ ಸೆರೆಯ (ಸೆರೆವಾಸ) ನಂತರ ಬರೆಯಲಾಗಿದೆ.
\is ಸ್ವೀಕೃತದಾರರು
\ip ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಜನರು ಮತ್ತು ಸೆರೆವಾಸದಿಂದ ಹಿಂದಿರುಗಿದವರು.
\is ಉದ್ದೇಶ
\ip ಸ್ವಂತ ನಾಡಿಗೆ ಹಿಂದಿರುಗಿದರ ಸಂತೃಪ್ತಿಯ ಸ್ಥಿತಿಯಿಂದ ಹೊರಬಂದು ದೇವಾಲಯದ ಪುನರ್ನಿರ್ಮಾಣವನ್ನು ಮತ್ತು ಆರಾಧನೆಯನ್ನು ರಾಷ್ಟ್ರದ ಮುಖ್ಯ ಗುರಿಯಾಗಿಸಲು ಪ್ರಯತ್ನ ಮಾಡುವ ಮೂಲಕ ನಂಬಿಕೆಯನ್ನು ವ್ಯಕ್ತಪಡಿಸುವುದಕ್ಕೆ ಹಿಂದಿರುಗಿದ ಅವಶೇಷ ಜನಸಮುದಾಯವನ್ನು ಪ್ರೋತ್ಸಾಹಿಸಲು, ಅವರು ದೇವಾಲಯವನ್ನು ಪುನರ್ನಿರ್ಮಿಸುವ ಕಡೆಗೆ ಸಾಗುವಾಗ ಯೆಹೋವನು ಅವರನ್ನು ಮತ್ತು ನಾಡನ್ನು ಆಶೀರ್ವದಿಸುವನು ಎಂದು ಅವರನ್ನು ಪ್ರೋತ್ಸಾಹಿಸಲು, ಅವರ ಹಿಂದಿನ ತಿರುಗಿ ಬೀಳುವಿಕೆಯ ಹೊರತಾಗಿಯೂ ಯೆಹೋವನು ಅವರಿಗಾಗಿ ಭವಿಷ್ಯದಲ್ಲಿ ಮಹತ್ವದ ಸ್ಥಾನಮಾನವನ್ನು ಇಟ್ಟಿದ್ದಾನೆ ಎಂದು ಹಿಂದಿರುಗಿದ ಅವಶೇಷ ಜನಸಮುದಾಯವನ್ನು ಪ್ರೋತ್ಸಾಹಿಸಲು.
\is ಮುಖ್ಯಾಂಶ
\ip ದೇವಾಲಯದ ಪುನರ್ನಿರ್ಮಾಣ
\iot ಪರಿವಿಡಿ
\io1 1. ದೇವಾಲಯದ ನಿರ್ಮಾಣಕ್ಕೆ ಕರೆ (1:1-15)
\io1 2. ಕರ್ತನಲ್ಲಿ ಧೈರ್ಯ (2:1-9)
\io1 3. ಜೀವನದ ಶುದ್ಧತೆಗಾಗಿ ಕರೆ (2:10-19)
\io1 4. ಭವಿಷ್ಯದ ಕುರಿತಾಗಿರುವ ಆತ್ಮವಿಶ್ವಾಸಕ್ಕಾಗಿ ಕರೆ (2:20-23)
\v 1 ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
\s ದೇವಾಲಯವನ್ನು ಪುನಃ ಕಟ್ಟಲು ಎಚ್ಚರಿಕೆ
\p
\v 2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ>> ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
\v 9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು;
\q ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ.
\q ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.>>
\v 12 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ
\f +
\fr 1:12
\fq ಇಸ್ರಾಯೇಲ್ ಜನಶೇಷ
\ft ಬಾಬೆಲೋನಿನ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರಾಯೇಲ್ ಜನರು.
\f* , ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
\p
\v 13 ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, <<ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.>>
\v 10 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
\v 11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಯಾಜಕರ ಹತ್ತಿರ ಹೋಗಿ,
\v 12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು>> ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು <<ಇಲ್ಲ>> ಎಂದು ಉತ್ತರಕೊಟ್ಟರು.
\v 13 ಆ ಮೇಲೆ ಹಗ್ಗಾಯನು, <<ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?>> ಎಂದು ಕೇಳಿದ್ದಕ್ಕೆ ಯಾಜಕರು, <<ಅಶುದ್ಧವೇ ಆಗುವುದು>> ಎಂದು ಉತ್ತರಕೊಟ್ಟರು.
\v 14 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, <<ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
\v 18 <<ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
\v 19 ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.>>