\ip ಮಲಾಕಿ 1:1 ನೇ ವಚನವು ಪ್ರವಾದಿಯಾದ ಮಲಾಕಿಯನು ಪುಸ್ತಕದ ಗ್ರಂಥಕರ್ತನೆಂದು ಗುರುತಿಸುತ್ತದೆ. ಹೀಬ್ರೂನಲ್ಲಿ, "ದೂತನು" ಎಂಬ ಅರ್ಥವುಳ್ಳ ಪದದಿಂದ ಈ ಹೆಸರು ಬಂದಿದೆ. ಇದು ಕರ್ತನ ಪ್ರವಾದಿಯಾಗಿ ದೇವರ ಸಂದೇಶವನ್ನು ದೇವಜನರಿಗೆ ಪ್ರಕಟಿಸುವ ಮಲಾಕಿಯ ಕೆಲಸವನ್ನು ಸೂಚಿಸುತ್ತದೆ. ಇದನ್ನು ಎರಡು ರೀತಿಯಲ್ಲಿ ಅರ್ಥಮಾಡಿಕೊಳ್ಳಬಹುದು, "ಮಲಾಕಿಯನು" ನಮಗೆ ಈ ಪುಸ್ತಕವನ್ನು ತಂದ ದೂತನಾಗಿದ್ದಾನೆ, ಮತ್ತು ಅವನ ಸಂದೇಶವೇನೆಂದರೆ ದೇವರು ಭವಿಷ್ಯದಲ್ಲಿ ಮತ್ತೊಬ್ಬ ದೂತನನ್ನು ಕಳುಹಿಸುತ್ತಾನೆ, ಅವನು ಮಹಾನ್ ಪ್ರವಾದಿಯಾದ ಎಲೀಯನಾಗಿದ್ದು ಕರ್ತನ ದಿನಕ್ಕಿಂತ ಮುಂಚೆ ಹಿಂದಿರುಗಿ ಬರುವನು.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 430 ರ ಕಾಲದಲ್ಲಿ ಬರೆದಿರಬಹುದು.
\ip ಇದು ಸೆರೆವಾಸದ ನಂತರದ ಪುಸ್ತಕವಾಗಿದೆ, ಅಂದರೆ ಬಾಬಿಲೋನಿನಲ್ಲಿನ ಸೆರೆಯಿಂದ ಹಿಂದಿರುಗಿದ ನಂತರ ಇದನ್ನು ಬರೆಯಲಾಗಿದೆ.
\is ಸ್ವೀಕೃತದಾರರು
\ip ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗಿರುವ ಪತ್ರವಾಗಿದೆ ಮತ್ತು ಎಲ್ಲೆಡೆಯಿರುವ ದೇವರ ಜನರಿಗಿರುವ ಸಾಮಾನ್ಯ ಪತ್ರವಾಗಿದೆ.
\is ಉದ್ದೇಶ
\ip ದೇವರು ತನ್ನ ಜನರಿಗೆ ಸಹಾಯ ಮಾಡುವುದಕ್ಕಾಗಿ ಮಾಡಬಹುದಾದ ಎಲ್ಲವನ್ನೂ ಮಾಡುವನು ಎಂದು ಜನರಿಗೆ ನೆನಪಿಸಲು ಮತ್ತು ದೇವರು ನ್ಯಾಯಾಧಿಪತಿಯಾಗಿ ಬರುವಾಗ ಅವರ ಕೆಟ್ಟತನಕ್ಕೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಲೆಕ್ಕ ಕೇಳುವನು ಎಂದು ಜನರಿಗೆ ನೆನಪಿಸಲು, ಒಡಂಬಡಿಕೆಯ ಆಶೀರ್ವಾದಗಳು ನೆರವೇರುವುದಕ್ಕಾಗಿ ಜನರು ತಮ್ಮ ಕೆಟ್ಟತನದಿಂದ ಪಶ್ಚಾತ್ತಾಪಪಡಬೇಕೆಂದು ಜನರನ್ನು ಹುರಿದುಂಬಿಸಲು ಬರೆದ ಪುಸ್ತಕವಾಗಿದೆ. ದೇವರ ಕಡೆಗೆ ತಿರುಗುವಂತೆ ಜನರಿಗೆ ಹೇಳುವುದಕ್ಕಾಗಿ ಇದು ಮಲಾಕಿಯನ ಮೂಲಕ ಉಂಟಾದ ದೇವರ ಎಚ್ಚರಿಕೆಯಾಗಿತ್ತು. ಹಳೆಯ ಒಡಂಬಡಿಕೆಯ ಅಂತಿಮ ಪುಸ್ತಕವು ಮುಕ್ತಾಯವಾಗುವಾಗ, ದೇವರ ನ್ಯಾಯದ ಘೋಷಣೆ ಮತ್ತು ಬರುವ ಮೆಸ್ಸೀಯನ ಮೂಲಕ ಉಂಟಾಗುವ ಆತನ ಪುನಃಸ್ಥಾಪನೆಯ ವಾಗ್ದಾನವು ಇಸ್ರಾಯೇಲ್ಯರ ಕಿವಿಗಳಲ್ಲಿ ಮೊಳಗುತ್ತಿದೆ.
\is ಮುಖ್ಯಾಂಶ
\ip ಬಹಿರಾಚರಣೆಯ ಖಂಡನೆ
\iot ಪರಿವಿಡಿ
\io1 1. ದೇವರನ್ನು ಗೌರವಿಸುವಂತೆ ಯಾಜಕರಿಗೆ ಪ್ರಬೋಧನೆ (1:1—2:9)
\v 2 ಯೆಹೋವನು ಇಂತೆನ್ನುತ್ತಾನೆ, <<ನಾನು ನಿಮ್ಮನ್ನು ಪ್ರೀತಿಸಿದ್ದೇನೆ.>> ನೀವೋ <<ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?>> ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?
\v 3 <<ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ
\f +
\fr 1:3
\fq ದ್ವೇಷಿಸಿ
\ft ಅಥವಾ ತಿರಸ್ಕರಿಸಿ. ರೋಮಾ. 9:13.
\f* , ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ>> ಇದು ಯೆಹೋವನ ನುಡಿ.
\s5
\v 4 ಹೀಗಿರಲು ಎದೋಮ್ಯರು
\f +
\fr 1:4
\fq ಎದೋಮ್ಯರು
\ft ಏಸಾವನ ವಂಶದವರು.
\f* , <<ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು>> ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.
\v 5 ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, <ಮಹಾ ಮಹಿಮೆಯುಳ್ಳವನು> >> ಅಂದುಕೊಳ್ಳುವಿರಿ.
\v 6 <<ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?>> ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, <<ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?>> ಅನ್ನುತ್ತೀರಿ.
\v 7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. <<ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?>> ಅನ್ನುತ್ತೀರಿ. <<ಯೆಹೋವನ ಮೇಜಿಗೆ ಘನತೆಯೇನಿದೆ?>> ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.
\v 8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
\v 9 <<ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 10 <<ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 11 <<ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\p
\v 12 ನೀವೋ, <<ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
\v 13 ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. <<ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ>> ಇದು ಯೆಹೋವನ ನುಡಿ.
\v 14 <<ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.
\s5
\v 3 ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.
\v 4 ನಾನು ಲೇವಿಯರೊಂದಿಗೆ
\f +
\fr 2:4
\fq ಲೇವಿಯರೊಂದಿಗೆ
\ft ಲೇವಿ ಸಂತಾನದವರು.
\f* ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 5 <<ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.
\v 6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
\v 7 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
\v 8 <<ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 9 <<ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.>>
\v 10 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದವನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?
\v 11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.
\v 12 ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.
\v 13 ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
\v 14 <<ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
\v 15 ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.>>
\v 16 ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. <<ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.>>
\v 17 ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. <<ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?>> ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.
\v 1 <<ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
\v 3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ
\f +
\fr 3:3
\fq ಸದ್ಧರ್ಮಿಗಳಾಗಿ
\ft ಯೋಗ್ಯವಾದ.
\f* ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
\s5
\v 4 ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.
\v 5 <<ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\s5
\v 6 <<ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.>>
\v 7 <<ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. <<ಯಾವ ವಿಷಯದಲ್ಲಿ ತಿರುಗೋಣ?>> ಎನ್ನುತ್ತೀರಿ.
\v 10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
\v 11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 12 <<ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 16 ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
\v 17 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
\v 18 ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
\v 1 <<ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
\v 2 ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
\v 3 ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.